Webdunia - Bharat's app for daily news and videos

Install App

ಬಿಜೆಪಿ ಮೇಲೆ ಬೇಸರಗೊಂಡ ಎಚ್ ಡಿ ಕುಮಾರಸ್ವಾಮಿ

Krishnaveni K
ಸೋಮವಾರ, 18 ಮಾರ್ಚ್ 2024 (20:53 IST)
ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಸೀಟು ಹಂಚಿಕೆ ವಿಚಾರಕ್ಕೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮತ್ತು ಬಿಜೆಪಿ ನಾಯಕರ ನಡುವೆ ಈಗ ಟಿಕೆಟ್ ಹಂಚಿಕೆ ವಿಚಾರವೇ ಮನಸ್ತಾಪಕ್ಕೆ ಕಾರಣವಾಗುವ ನಿರೀಕ್ಷೆಯಿದೆ.

ಇದೀಗ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಬಹಿರಂಗವಾಗಿಯೇ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಜೆಡಿಎಸ್ ಗೆ ಬಿಜೆಪಿ ಮೊದಲು ಮೂರು ಸೀಟು ಬಿಟ್ಟುಕೊಡಲು ಮಾತುಕತೆ ನಡೆದಿತ್ತು. ಆ ಪೈಕಿ ಹಾಸನ ಮತ್ತು ಮಂಡ್ಯ ಟಿಕೆಟ್ ಜೆಡಿಎಸ್ ಗೆ ಫಿಕ್ಸ್ ಆಗಿದೆ. ಆದರೆ ಕೋಲಾರದಲ್ಲಿ ಟಿಕೆಟ್ ನೀಡಲು ಮೀನ ಮೇಷ ಎಣಿಸುತ್ತಿದೆ.

ಇದು ಕುಮಾರಸ್ವಾಮಿ ಬೇಸರಕ್ಕೆ ಕಾರಣವಾಗಿದೆ. ಕೇವಲ ಎರಡು ಸೀಟು ಕೊಡುವುದಾದರೆ ಇಷ್ಟೆಲ್ಲಾ ಸೀಟು ಹಂಚಿಕೆ, ಹೊಂದಾಣಿಕೆ ಮಾತುಕತೆ ಬೇಕಾ ಎಂದು ಕುಮಾರಸ್ವಾಮಿ ಬಹಿರಂಗವಾಗಿಯೇ ಅಸಮಾಧಾನ ತೋಡಿಕೊಂಡಿದ್ದಾರೆ. ನಮ್ಮ ಉದ್ದೇಶ ಕಾಂಗ್ರೆಸ್ ನನ್ನು ಎಲ್ಲಾ 28 ಕ್ಷೇತ್ರಗಳಲ್ಲಿ ಸೋಲಿಸಬೇಕು ಎಂದು. ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಶಕ್ತಿ ಕಡಿಮೆಯಿದೆ. ಅಲ್ಲಿ ನಮ್ಮನ್ನು ಹೇಗೆ ಬಳಸಬೇಕು ಎಂಬ ಬಗ್ಗೆ ಬಿಜೆಪಿ ಯೋಜನೆ ರೂಪಿಸಬೇಕು ಎಂದಿದ್ದಾರೆ.

ಮೈತ್ರಿಯಿಂದ ಜೆಡಿಎಸ್ ಗೆ ಹೆಚ್ಚು ಲಾಭವಾಗಿಲ್ಲ ಎಂದು ನಮ್ಮ ಮುಖಂಡರ ಬಳಿ ಅಸಮಾಧಾನವಿದೆ. ಅದನ್ನು ಸರಿಪಡಿಸಬೇಕು. ನಮ್ಮನ್ನು ಕಡೆಗಣಿಸಿದರೆ ಅದರ ಸಾಧಕ ಬಾಧಕಗಳಿಗೆ ಅವರೇ ಜವಾಬ್ಧಾರಿಯಾಗಬೇಕಾಗುತ್ತದೆ ಎಂದು ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಜಲಪಾತದಲ್ಲಿ ರೊಮ್ಯಾಂಟಿಕ್ ಆಗಿ ಗರ್ಲ್ ಫ್ರೆಂಡ್ ಗೆ ಪ್ರಪೋಸ್ ಮಾಡಿದ ಬೆನ್ನಲ್ಲೇ ನಡೆಯಿತು ದುರಂತ: Video

ಮಾಡೋದೆಲ್ಲಾ ಮಾಡಿ ದಲಿತ ಕಾರ್ಡ್ ಬಳಸಿ ಪ್ರಕರಣ ಮುಚ್ಚಿ ಹಾಕಲು ನೋಡೋದು: ನಾಗೇಂದ್ರ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ಜಿಮ್ ಮಾಡುತ್ತಿದ್ದಾಗಲೇ ಕುಸಿದು ಅಲ್ಲೇ ಮರಣ: ವೈರಲ್ ಆಯ್ತು ವೈದ್ಯರೊಬ್ಬರ ಕೊನೆಯ ಕ್ಷಣ Video

ತರಗತಿಯಲ್ಲಿ ವಿದ್ಯಾರ್ಥಿಗೆ ಮನಬಂದಂತೆ ಹೊಡೆದ ಶಿಕ್ಷಕ: ಕ್ರೂರ ಕೃತ್ಯದ ವಿಡಿಯೋ ನೋಡಿದ್ರೆ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments