Select Your Language

Notifications

webdunia
webdunia
webdunia
webdunia

ವರುಣಾದಲ್ಲಿ ವಿಜಯೇಂದ್ರ ಕಣದಿಂದ ಹಿಂದೆ ಸರಿದ ರಹಸ್ಯ ತಿಳಿಸಿದ ಎಂದ ಎಚ್ ಡಿ ರೇವಣ್ಣ

ವರುಣಾದಲ್ಲಿ ವಿಜಯೇಂದ್ರ ಕಣದಿಂದ ಹಿಂದೆ ಸರಿದ ರಹಸ್ಯ ತಿಳಿಸಿದ ಎಂದ ಎಚ್ ಡಿ ರೇವಣ್ಣ
ಹಾಸನ , ಬುಧವಾರ, 25 ಏಪ್ರಿಲ್ 2018 (13:01 IST)
ಹಾಸನ: ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸ್ಪರ್ಧಿಸುತ್ತಿರುವ ವರುಣಾ ಕ್ಷೇತ್ರದಲ್ಲಿ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಕಣದಿಂದ ಹಿಂದೆ ಸರಿಯಲು ಕಾರಣವೇನೆಂದು ಜೆಡಿಎಸ್ ನಾಯಕ ಎಚ್ ಡಿ ರೇವಣ್ಣ ಹೇಳಿಕೊಂಡಿದ್ದಾರೆ.

ವರುಣಾದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡಿದೆ. ಇದೇ ಕಾರಣಕ್ಕೆ ಅಲ್ಲಿ ಮೊದಲು ಸ್ಪರ್ಧಿಸುತ್ತೇನೆಂದು ಪ್ರಚಾರಕ್ಕಿಳಿದಿದ್ದ ವಿಜಯೇಂದ್ರ ನಂತರ ಕಣದಿಂದ ಹಿಂದೆ ಸರಿದಿದ್ದಾರೆ. ಆದರೆ ನಾವು ಯಾವ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದು ರೇವಣ್ಣ ಹೇಳಿಕೊಂಡಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆಯ ಫಲದಿಂದಾಗಿಯೇ ವಿಜಯೇಂದ್ರ ವರುಣಾದಿಂದ ಹಿಂದೆ ಸರಿದರು ಎಂದು ಅವರು ಆಪಾದಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ತವರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಭರ್ಜರಿ ರೋಡ್ ಶೋ