Webdunia - Bharat's app for daily news and videos

Install App

ಮಕ್ಕಳ ಬಂಧನ ಬೆನ್ನಲ್ಲೇ ಎಚ್ ಡಿ ರೇವಣ್ಣಗೆ ಇನ್ನೊಂದು ಸಂಕಷ್ಟ: ಆಸ್ಪತ್ರೆಗೆ ದಾಖಲು

Krishnaveni K
ಬುಧವಾರ, 17 ಜುಲೈ 2024 (16:05 IST)
ಬೆಂಗಳೂರು: ಮಕ್ಕಳಿಬ್ಬರೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದಲ್ಲಿರುವಾಗಲೇ ಶಾಸಕ ಎಚ್ ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕಾಲು ಜಾರಿ ಬಿದ್ದು ಪೆಟ್ಟುಮಾಡಿಕೊಂಡಿರುವ ಅವರೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎಚ್ ಡಿ ರೇವಣ್ಣ ಹೊಳೆನರಸೀಪುರದ ಹರದನಹಳ್ಳಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಇಂದು ಆಷಾಢ ಏಕಾದಶಿಯಾಗಿದ್ದು ಉಪವಾಸವಿದ್ದು ದೇವರ ದರ್ಶನ ಮಾಡಲು ಬಂದಿದ್ದಾರೆ. ಆದರೆ ಪೂಜೆ ಸಲ್ಲಿಸಿ ಬರುವಾಗ ಕಾಲು ಜಾರಿ ಬಿದ್ದಿದ್ದಾರೆ. ಪರಿಣಾಮ ಅವರು ಪಕ್ಕೆಲುಬಿಗೆ ಪೆಟ್ಟು ಮಾಡಿಕೊಂಡಿದ್ದಾರೆ.

ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸದ್ಯಕ್ಕೆ ಹೊಳೆನರಸೀಪುರದ ಸರ್ಕಾರೀ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಕ್ಕಳ ಜೊತೆಗೆ ಇಡೀ ರೇವಣ್ಣ ಕುಟುಂಬವೇ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣದಲ್ಲಿ ಸಂಕಷ್ಟದಲ್ಲಿದೆ. ಈ ನಿಮಿತ್ತ ದೇವರಲ್ಲಿ ಮಕ್ಕಳನ್ನು ಕಾಪಾಡು ಎಂದು ಪ್ರಾರ್ಥನೆ ನಡೆಸಲು ಬಂದಿದ್ದರು. ಈ ವೇಳೆಯೇ ಕಾಲು ಜಾರಿ ಬಿದ್ದು ಪೆಟ್ಟುಮಾಡಿಕೊಂಡಿದ್ದು ವಿಪರ್ಯಾಸ.

ಮಹಿಳೆಯ ಅಪಹರಣ ಪ್ರಕರಣದಲ್ಲಿ ಎಚ್ ಡಿ ರೇವಣ್ಣ ಕೂಡಾ ಬಂಧಿತರಾಗಿದ್ದರು. ಆದರೆ ಬಳಿಕ ಜಾಮೀನಿನ ಮೇಲೆ ಹೊರಬಂದಿದ್ದರು. ನಿನ್ನೆಯಷ್ಟೇ ಸದನದಲ್ಲೂ ಅವರು ಭಾಗಿಯಾಗಿ ತಮ್ಮ ಕುಟುಂಬದ ಮೇಲಿರುವ ಪ್ರಕರಣಗಳ ಬಗ್ಗೆ ಭಾವುಕರಾಗಿ ಮಾತನಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

ಮುಂದಿನ ಸುದ್ದಿ