Webdunia - Bharat's app for daily news and videos

Install App

ನನ್ನನ್ನು ಯಾರೂ ಅಪಹರಿಸಿರಲಿಲ್ಲ: ಉಲ್ಟಾ ಹೊಡೆದ ಮಹಿಳೆಯಿಂದ ಎಚ್ ಡಿ ರೇವಣ್ಣಗೆ ಲಾಭ

Krishnaveni K
ಸೋಮವಾರ, 13 ಮೇ 2024 (09:41 IST)
ಹಾಸನ: ನನ್ನನ್ನು ಯಾರೂ ಅಪಹರಿಸಿಲ್ಲ, ನಾಲ್ಕು ದಿನ ನೆಂಟರ ಮನೆಗೆ ಹೋಗಿ ಬರೋಣ ಎಂದು ಬಂದಿದ್ದೆ ಎಂದು ಅಪಹರಣಕ್ಕೊಳಗಾಗಿದ್ದಾಳೆ ಎನ್ನಲಾಗಿದ್ದ ಮಹಿಳೆ ಹೇಳಿಕೆ ನೀಡಿದ್ದು ಬಂಧಿತರಾಗಿರುವ ಮಾಜಿ ಸಚಿವ ಎಚ್ ಡಿ ರೇವಣ್ಣಗೆ ಇದರಿಂದ ಲಾಭವಾಗಲಿದೆ.

ಮಹಿಳೆಯರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್ ಡಿ ರೇವಣ್ಣರನ್ನು ಬಂಧಿಸಲಾಗಿತ್ತು. ಈ ಸಂಬಂಧ ರೇವಣ್ಣ ಆಪ್ತನನ್ನೂ ಬಂಧಿಸಲಾಗಿತ್ತು. ಅಲ್ಲದೆ, ಭವಾನಿ ರೇವಣ್ಣಗೂ ನೋಟಿಸ್ ನೀಡಲಾಗಿತ್ತು. ಆದರೆ ಈಗ ಮಹಿಳೆ ವಿಡಿಯೋವೊಂದನ್ನು ಬಿಡುಗಡೆ ಮಾಡಿ ನನ್ನನ್ನು ಯಾರೂ ಅಪಹರಿಸಿಲ್ಲ ಎಂದಿರುವುದು ಪ್ರಕರಣಕ್ಕೆ ಟ್ವಿಸ್ಟ್ ನೀಡಿದೆ.

‘ನನ್ನನ್ನು ಯಾರೂ ಅಪಹರಿಸಿಲ್ಲ. ನಾನಾಗಿಯೇ ಮನೆಯಿಂದ ಹೊರಬಂದಿದ್ದೇನೆ. ಭವಾನಿ ರೇವಣ್ಣ, ಪ್ರಜ್ವಲ್, ಬಾಬಣ‍್ಣರಿಂದ ನನಗೆ ಯಾವುದೇ ತೊಂದರೆಯಾಗಿಲ್ಲ. ನಮ್ಮ ಊರಿನವರು ಏನೇನೋ ಹೇಳುವುದು ಕೇಳಿ ಬೇಸರವಾಗಿತ್ತು. ಹೀಗಾಗಿ ನೆಂಟರ ಮನೆಗೆ ಹೋಗಿದ್ದೆ. ಎರಡು ದಿನಗಳ ಬಳಿಕ ನಾನೇ ಬರುತ್ತೇನೆ. ದಯವಿಟ್ಟು ಯಾರೂ ಮನೆ ಹತ್ರ ಬಂದು ನಮಗೆ ತೊಂದರೆ ಕೊಡಬೇಡಿ. ಮನೆ ಹತ್ರ ಪೊಲೀಸರು ಬಂದರೆ ಅಕ್ಕಪಕ್ಕದವರು ಏನಂದುಕೊಳ್ಳಲ್ಲ? ಮಕ್ಕಳು ಗಾಬರಿಯಾಗುತ್ತಾರೆ. ನನಗೆ, ನನ್ನ ಗಂಡ, ಮಕ್ಕಳಿಗೆ ಏನಾದರೂ ಆದರೆ ನೀವೇ ಹೊಣೆಯಾಗಬೇಕಾಗುತ್ತದೆ. ಅದಕ್ಕೆ ರೆಡಿ ಎಂದರೆ ಬರಬಹುದು’ ಎಂದು ಮಹಿಳೆ ವಿಡಿಯೋದಲ್ಲಿ ಹೇಳಿಕೆ ನೀಡಿದ್ದಾಳೆ.

ಆಕೆಯ ಈ ಹೇಳಿಕೆ ಪ್ರಕರಣಕ್ಕೆ ಹೊಸ ತಿರುವು ನೀಡಲಿದೆ.  ಸದ್ಯಕ್ಕೆ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಎಚ್ ಡಿ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮೇ 14 ರವರೆಗೆ ಅಂದರೆ ನಾಳೆಯವರೆಗೆ ಅವರ ನ್ಯಾಯಾಂಗ ಬಂಧನ ಅವಧಿಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments