Select Your Language

Notifications

webdunia
webdunia
webdunia
webdunia

ಸಂಕಷ್ಟ ನಿವಾರಣೆಗಾಗಿ ಗಾಣಗಾಪುರದ ದತ್ತನಿಗೆ ವಿಶೇಷ ಪೂಜೆ ಸಲ್ಲಿಸಿದ ಎಚ್‌ ಡಿ ರೇವಣ್ಣ

HD Revanna

sampriya

ಕಲಬುರಗಿ , ಗುರುವಾರ, 23 ಮೇ 2024 (16:05 IST)
Photo By X
ಕಲಬುರಗಿ: ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಜಾಮೀನು ಮೇಲೆ ಹೊರಬಂದಿರುವ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಇವರು ಇದೀಗ ಮತ್ತೇ ದೇವರ ಮೊರೆ ಹೋಗಿದ್ದಾರೆ.

ಇಂದು ಕಲಬುರಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನ ಗಾಣಗಾಪುರದ ದತ್ತ ದೇವಸ್ಥಾನಕ್ಕೆ ಭೇಟಿ ನೀಡಿ ಸಂಕಷ್ಟ ನಿವಾರಣೆಯಾಗಲೆಂದು ಭೇಡಿಕೊಂಡರು.

ಇಂದು ಬೆಳಗ್ಗೆ 9:30ಕ್ಕೆ ಬೆಂಗಳೂರಿನಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರೇವಣ್ಣ, ಬಳಿಕ ರಸ್ತೆ ಮೂಲಕ ಗಾಣಗಾಪುರಕ್ಕೆ ತೆರಳಿದರು. ಈ ವೇಳೆ ದೇವಸ್ಥಾನದಲ್ಲಿ ದತ್ತನ ನಿರ್ಗುಣ ಪಾದುಕೆಗಳಿಗೆ ರೇವಣ್ಣ ವಿಶೇಷ ಪೂಜೆ ಸಲ್ಲಿಸಿ, ಎದುರಾಗಿರೋ ಸಂಕಷ್ಟಗಳನ್ನ ನಿವಾರಿಸು ಸ್ವಾಮಿ ಎಂದು ಪ್ರಾರ್ಥಿಸಿದರು.

ಇನ್ನೂ ದೇವಸ್ಥಾನದಲ್ಲಿ ಒಂದು ಗಂಟೆಗಳ ಕಾಲ ಸಮಯ ಕಳೆದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಶಿಸ್ತು ಉಲ್ಲಂಘನೆ: ರಘುಪತಿ ಭಟ್‌ಗೆ ನೋಟಿಸ್‌ ಜಾರಿ