Webdunia - Bharat's app for daily news and videos

Install App

ಎಚ್ ಡಿ ರೇವಣ್ಣ ಎಸ್ಐಟಿ ಕಸ್ಟಡಿ ಅವಧಿ ಇಂದು ಅಂತ್ಯ

Krishnaveni K
ಬುಧವಾರ, 8 ಮೇ 2024 (09:08 IST)
ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅಪಹರಣ ಆರೋಪದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ಎಚ್ ಡಿ ರೇವಣ್ಣ ಎಸ್ಐಟಿ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದೆ.

ಮೊನ್ನೆಯಷ್ಟೇ ಎಚ್ ಡಿ ರೇವಣ್ಣನನ್ನು ಅವರ ನಿವಾಸದಿಂದಲೇ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ನ್ಯಾಯಾಲಯ ಅವರನ್ನು ಮೂರು ದಿನಗಳ ಕಾಲ ಎಸ್ಐಟಿ ವಶಕ್ಕೊಪ್ಪಿಸಿತ್ತು. ಇಂದು ಅವರ ಕಸ್ಟಡಿ ಅವಧಿ ಮುಕ್ತಾಯವಾಗುತ್ತಿದೆ. ಹೀಗಾಗಿ ಅವರ ಪರ ವಕೀಲರು ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ.

ಆದರೆ ಸದ್ಯಕ್ಕೆ ಅವರು ಎಸ್ಐಟಿ ವಶದಲ್ಲಿರುವ ಕಾರಣ ಈಗ ಜಾಮೀನು ನೀಡಲು ಸಾಧ‍್ಯವಿಲ್ಲ ಎಂದು ಕೋರ್ಟ್ ಕಾರಣ ನೀಡಿದೆ. ಸದ್ಯಕ್ಕೆ ಇಂದಿನವರೆಗೆ ಎಸ್ಐಟಿ ವಿವರಣೆ ನೀಡಲಿ ಎಂಬ ಕಾರಣಕ್ಕೆ ಇಂದಿನವರೆಗೆ ಅವಧಿ ವಿಸ್ತರಿಸಲಾಗಿದೆ. ಹೀಗಾಗಿ ಇಂದಿನ ದಿನ ರೇವಣ್ಣಗೆ ನಿರ್ಣಾಯಕವಾಗಲಿದೆ.

ಇಂದು ಕೋರ್ಟ್ ರೇವಣ್ಣಗೆ ಜಾಮೀನು ಮಂಜೂರು ಮಾಡುತ್ತದಾ ಅಥವಾ ಮತ್ತೆ ಎಸ್ಐಟಿ ವಶಕ್ಕೊಪ್ಪಿಸುತ್ತದೆಯೇ ಎಂದು ಕಾದು ನೋಡಬೇಕಿದೆ.  ಇನ್ನೊಂದೆಡೆ ವಿಚಾರಣೆ ವೇಳೆ ಎಸ್ಐಟಿ ತಂಡ ಎಷ್ಟೇ ಪ್ರಶ್ನೆ ಮಾಡಿದರೂ ಈ ಪ್ರಕರಣದಲ್ಲಿ ತನ್ನ ಪಾತ್ರವಿಲ್ಲ ಎಂದು ಎಚ್ ಡಿ ರೇವಣ್ಣ ಹೇಳುತ್ತಲೇ ಬಂದಿದ್ದಾರೆ. ಹೀಗಾಗಿ ತನಿಖಾ ತಂಡಕ್ಕೆ ಕೇಸ್ ಮುಂದುವರಿಸಲು ಕಷ್ಟವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ