ಬೇಲ್ ಪಡೆದ ಎಚ್ ಡಿ ರೇವಣ್ಣಗೆ ಇಂದು ಜೈಲಿನಿಂದ ಬಿಡುಗಡೆ ಭಾಗ್ಯ

Krishnaveni K
ಮಂಗಳವಾರ, 14 ಮೇ 2024 (09:29 IST)
ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣ ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ನಿನ್ನೆ ಸಂಜೆಯೇ ಅವರಿಗೆ ಜಾಮೀನು ಮಂಜೂರಾಗಿತ್ತು. ಆದರೆ ಆದೇಶ ಪ್ರತಿ ಜೈಲು ಅಧಿಕಾರಿಗಳಿಗೆ ಸಿಗುವ ತನಕ ಬಿಡುಗಡೆ ಸಾಧ‍್ಯವಿಲ್ಲ. ಹೀಗಾಗಿ ಇಂದು ರೇವಣ್ಣ ಪರಪ್ಪನ ಅಗ್ರಹಾರ ಕಾರಾಗೃಹದಿಂದ ಬಿಡುಗಡೆಯಾಗಲಿದ್ದಾರೆ. ಜಾಮೀನು ಸಿಕ್ಕ ಬೆನ್ನಲ್ಲೇ ರೇವಣ್ಣ ದೇವರಿಗೆ ಧನ್ಯವಾದ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ರೇವಣ್ಣ ಸೂಚನೆ ಮೇರೆಗೇ ಅವರ ಆಪ್ತರು ಮಹಿಳೆಯನ್ನು ಅಪಹರಿಸಿದ್ದರು ಎಂಬುದಕ್ಕೆ ಎಸ್ಐಟಿ ತಂಡ ಸೂಕ್ತ ಸಾಕ್ಷ್ಯ ಒದಗಿಸುವಲ್ಲಿ ವಿಫಲವಾಗಿದೆ. ಈ ಮೊದಲು ಕೋರ್ಟ್ ಗೆ ಸಲ್ಲಿಸಲಾಗಿದ್ದ ರಿಮ್ಯಾಂಡ್ ಅಪ್ಲಿಕೇಷನ್ ನಲ್ಲಿ ಕೆಲವು ವಿಚಾರಗಳನ್ನು ಎಸ್ಐಟಿ ಉಲ್ಲೇಖಿಸಿಲ್ಲ. ಇದರ ಜೊತೆಗೆ ಸಂತ್ರಸ್ತ ಮಹಿಳೆಯೂ ಮೊನ್ನೆ ವಿಡಿಯೋ ಬಿಡುಗಡೆ ಮಾಡಿ ನನಗೆ ರೇವಣ್ಣ ಮತ್ತು ಆಪ್ತರಿಂದ ಯಾವುದೇ ತೊಂದರೆಯಾಗಿಲ್ಲ. ಯಾರೂ ನನ್ನನ್ನು ಅಪಹರಿಸಿಲ್ಲ ಎಂದು ಹೇಳಿಕೆ ನೀಡಿದ್ದಳು. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ರೇವಣ್ಣಗೆ 7 ಷರತ್ತುಗಳೊಂದಿಗೆ ಜಾಮೀನು ನೀಡಲಾಗಿದೆ.

ಇಂದು ಬೆಳಿಗ್ಗೆಯೇ ನ್ಯಾಯಾಲಯದಿಂದ ಆದೇಶ ಪ್ರತಿ ಪಡೆದು, ಷ್ಯೂರಿಟಿ ಬಾಂಡ್ ಗಳನ್ನು ನೀಡಲಾಗುತ್ತದೆ. ಈ ಆದೇಶ ಪ್ರತಿಯನ್ನು ಜೈಲು ಅಧಿಕಾರಿಗಳಿಗೆ ಸಲ್ಲಿಸಬೇಕಾಗುತ್ತದೆ. ಅದಾದ ಬಳಿಕ ಸಂಜೆ ರೇವಣ್ಣ ಬಿಡುಗಡೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಮುಂದಿನ ಸುದ್ದಿ
Show comments