Publish Date: Mon, 01 May 2023 (17:40 IST)
Updated Date: Mon, 01 May 2023 (18:04 IST)
ಮಾಜಿ ಪ್ರಧಾನಿ H.D. ದೇವೇಗೌಡರು ಇಂದು ಮಂಗಳೂರಿಗೆ ತೆರಳಲಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮೊಯಿದ್ದೀನ್ ಬಾವ ಪರ ಪ್ರಚಾರ ಮಾಡಲಿದ್ದಾರೆ. ಮಧ್ಯಾಹ್ನ ಹೆಲಿಕಾಪ್ಟರ್ ಮೂಲಕ ಮಂಗಳೂರಿಗೆ ಆಗಮಿಸಲಿರುವ H.D. ದೇವೇಗೌಡರು, ಮಧ್ಯಾಹ್ನ 2.30ಕ್ಕೆ ಸುರತ್ಕಲ್ನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಬಳಿಕ ಮಂಗಳೂರಿನ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 4 ಗಂಟೆಗೆ ಬಲವಂಡಿ ದೈವಸ್ಥಾನಕ್ಕೆ ಭೇಟಿ ನೀಡಿ, ಬಳಿಕ ಗುರುಪುರ ಕಂಬಳ ದರ್ಗಾಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 5 ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ಧಾರೆ. ಮಂಗಳೂರು ಉತ್ತರ JDS ಅಭ್ಯರ್ಥಿ ಮೊಯಿದ್ದೀನ್ ಬಾವ ಪರ ಪ್ರಚಾರ ಸಮಾವೇಶ ನಡೆಸಿ, ನಂತರ ವಾಪಸ್ ಬೆಂಗಳೂರಿಗೆ ಆಗಮಿಸಲಿದ್ದಾರೆ.