Publish Date: Sat, 02 Jul 2022 (16:46 IST)
Updated Date: Sat, 02 Jul 2022 (16:48 IST)
ರಾಜಣ್ಣ ವಿರುದ್ಧ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ದೇವೇಗೌಡರ ಬಗ್ಗೆ ರಾಜಣ್ಣ ಮಾತನ್ನಾಡಿದ್ದಾರೆ. ಅದು ಅವರ ಸಂಸ್ಕೃತಿ ತೋರಿಸುತ್ತೆ. ಕಳೆದ 2004ರಲ್ಲಿ ಅವರು ಬೆಳ್ಳಾವಿ ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಕೊನೆಯ ದಿನ ದೇವೇಗೌಡರು ಹೋಗಿ ಪ್ರಚಾರ ಮಾಡಿದ್ದರು. ಆಗ ಆ ವ್ಯಕ್ತಿ ವಿಧಾನಸೌಧಕ್ಕೆ ಮೆಟ್ಟಿಲು ಹತ್ತಲು ಸಾಧ್ಯವಾಯ್ತು. ಇಲ್ಲದಿದ್ದರೆ ಅವರನ್ನ ಯಾರು ಕೇಳುತ್ತಿದ್ದರು. ದೇವೇಗೌಡರ ಆರೋಗ್ಯ ಲೆಕ್ಕಿಸದೆ ಮಾತನ್ನಾಡಿದ್ದಾರೆ. ಇಬ್ಬರು ಹೆಗಲಿಗೆ ಹೆಗಲು ಕೊಡುತ್ತಾರೆ.
ದೇವಸ್ಥಾನದ ಆವರಣದಲ್ಲಿ ಪೂಜೆ ಸಲ್ಲಿಸುತ್ತೇವೆ. ದೇವರ ಮೆರವಣಿಗೆಗೂ ಭುಜ ಕೊಡಬೇಕು. ಭುಜಕೊಟ್ಟೇ ಮೆರವಣಿಗೆ ಮಾಡೋದಲ್ಲವೇ?. ಅವರ ಮಾತಿನ ದುರಹಂಕಾರ ಕೇಳಿದ್ದೇನೆ. ನೀನು ಬ್ರಹ್ಮ ಅಲ್ಲ, ನೀನು ಒಬ್ಬ ಹುಲು ಮಾನವ, ದೇವೇಗೌಡರು ಶತಾಯುಷಿಗಳಾಗಿ ನಾಡಿನಲ್ಲಿ ಬದುಕುತ್ತಾರೆ. ಹಲವಾರು ಒತ್ತಡಗಳಿಗೆ ಚುನಾವಣೆಗೆ ನಿಲ್ಲಿಸಿದರು. ತುಮಕೂರಿನಲ್ಲಿ ನಿಲ್ಲಿಸಿ ಸೋಲಿಸಿದರು. ಅವರನ್ನ ಸೋಲಿಸಲು ಕುತಂತ್ರ ನಡೆಸಿದ್ದು ರಾಜಣ್ಣ, ಇನ್ನೆರಡು ಮೂರು ತಿಂಗಳು ನೋಡಲಿ. ಅವರೇ ಸ್ವತಂತ್ರವಾಗಿ ಓಡಾಡುತ್ತಾರೆ. ಹಣೆಬರಹ ಬರೆದವರು ಎಲ್ಲರೂ ಹೋಗಿದ್ದಾರೆ. ಕ್ಷಮೆ ಕೇಳಬೇಕು ಅಂತಾ ಹೇಳೋದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ರು.