Select Your Language

Notifications

webdunia
webdunia
webdunia
webdunia

ಅಪಘಾತದಲ್ಲಿ ಮೃತರಾದವರಿಗೆ HDK ಸಂತಾಪ

ಅಪಘಾತದಲ್ಲಿ ಮೃತರಾದವರಿಗೆ HDK ಸಂತಾಪ
ಹಾಸನ , ಭಾನುವಾರ, 16 ಅಕ್ಟೋಬರ್ 2022 (17:19 IST)
ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಭೀಕರ ಅಪಘಾತವಾಗಿ 9 ಜನ ಮೃತ ಪಟ್ಟಿರುವುದಕ್ಕೆ ಮಾಜಿ ಮುಖ್ಯಮಂತ್ರಿ H. D ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಮೃತರೆಲ್ಲರೂ ಧರ್ಮಸ್ಥಳ ಸೇರಿ, ಕೆಲ ಪುಣ್ಯಕ್ಷೇತ್ರಗಳಿಗೆ ತೆರಳಿ ದೈವದರ್ಶನ ಪಡೆದು ತಮ್ಮ ಸ್ವಗ್ರಾಮಕ್ಕೆ ವಾಪಸಾಗುತ್ತಿದ್ದರು. ಇನ್ನು ಕೆಲ ಕಾಲವಷ್ಟೇ ಕ್ರಮಿಸಿದ್ದಿದ್ದರೆ ಮನೆ ಸೇರಿಕೊಳ್ಳುತ್ತಿದ್ದರು. ಆದರೆ, ಅವರೆಲ್ಲರೂ ಅಪಘಾತದಲ್ಲಿ ಸಾವಿಗೆ ತುತ್ತಾಗಿದ್ದಾರೆ. ಜಿಲ್ಲಾಧಿಕಾರಿಗಳು ಆಸ್ಪತ್ರೆಯಲ್ಲಿರುವ ಮೃತದೇಹಗಳ ಮರಣೋತ್ತರ ಪರೀಕ್ಷೆ ಮುಗಿಸಲು ಕ್ರಮ ವಹಿಸಿ, ತಕ್ಷಣ  ಸಂಬಂಧಿಕರಿಗೆ ಹಸ್ತಾಂತರ ಮಾಡಬೇಕು. ಗಾಯಾಳುಗಳಿಗೆ ಉಚಿತ, ಉತ್ತಮ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಮೃತರಿಗೆ ರಾಜ್ಯ ಬಿಜೆಪಿ ಸರ್ಕಾರ ಕೂಡಲೇ ಸೂಕ್ತ ಪರಿಹಾರ ಘೋಷಣೆ ಮಾಡಬೇಕು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಆ ಕುಟುಂಬಗಳಿಗೆ ಕರುಣಿಸಲಿ, ಹಾಗೂ ಗಾಯಾಳುಗಳೆಲ್ಲರೂ ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ 3 ದಿನ ಭಾರೀ ಮಳೆ ಸಾಧ್ಯತೆ..!