ಅಶ್ವತ್ಥ ನಾರಾಯಣ ರಾಜೀನಾಮೆಗೆ HDK ಆಗ್ರಹ

Webdunia
ಶುಕ್ರವಾರ, 23 ಸೆಪ್ಟಂಬರ್ 2022 (14:03 IST)
ವಿಧಾನಸಭೆಯಲ್ಲಿ ಸಚಿವ ಅಶ್ವತ್ಥ ನಾರಾಯಣ ಹಾಗೂ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ನಡುವೆ ಕಾವೇರಿದ ವಾಗ್ವಾದ, ಏಕವಚನದ ಬೈದಾಟಕ್ಕೆ ಕಾರಣವಾಗಿದ್ದ ಬಿಎಂಎಸ್​ ಟ್ರಸ್ಟ್​ ವಿವಾದ ಸದ್ಯಕ್ಕೆ ತಣ್ಣಗಾಗುವಂತೆ ಕಾಣಿಸುತ್ತಿಲ್ಲ. ವಿವಾದದ ಬಗ್ಗೆ  ಸರಣಿ ಟ್ವೀಟ್ ಮಾಡಿರುವ ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ, ಬಿಎಂಎಸ್ ಟ್ರಸ್ಟ್​ನ ಮೂಲ ಡೀಡ್ ಉಲ್ಲೇಖಿಸಿ ಆಡಳಿತಾರೂಢ ಬಿಜೆಪಿ ಸರ್ಕಾರ ಹಾಗೂ ಸಚಿವ ಅಶ್ವತ್ಥ ನಾರಾಯಣಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಬಿಎಂಎಸ್ ಟ್ರಸ್ಟ್​ನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ಟ್ರಸ್ಟ್‌ ಮತ್ತು ಆ ಟ್ರಸ್ಟ್‌ನ ಎಲ್ಲ ಸ್ವತ್ತುಗಳನ್ನು ರಾಜ್ಯ ಸರಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ತಕ್ಷಣ ರಾಜೀನಾಮೆ ಕೊಡಬೇಕು ಎಂದು ಎಚ್​ಡಿಕೆ ಆಗ್ರಹಿಸಿದ್ದಾರೆ. ಟ್ರಸ್ಟಿನಲ್ಲಿ ಸರಕಾರದ ಟ್ರಸ್ಟಿಗೇ ಕೊಕ್ ಕೊಟ್ಟು, ಈ ಟ್ರಸ್ಟಿನಲ್ಲಾಗುತ್ತಿದ್ದ ಗೋಲ್ʼಮಾಲ್ ಬಗ್ಗೆ ಸರಕಾರಿ ಟ್ರಸ್ಟಿಯಾಗಿದ್ದ ಐಎಎಸ್ ಅಧಿಕಾರಿ ಡಾ.ಮಂಜುಳಾ ಮತ್ತು ಇನ್ನೊರ್ವ ಐಎಎಸ್ ಅಧಿಕಾರಿ ಮದನ್ ಗೋಪಾಲ್ ಅವರು ಬರೆದ ಪತ್ರಗಳನ್ನು ಕಸದಬುಟ್ಟಿಗೆ ಹಾಕಿದ್ದು ಏಕೆ? ಇದರ ಹಿಂದಿನ ಹುನ್ನಾರ ಏನು ಉನ್ನತ ಶಿಕ್ಷಣ ಸಚಿವರೇ? ಉನ್ನತ ಶಿಕ್ಷಣ ಸಚಿವರಾದ ನಿಮ್ಮ ಉನ್ನತ ಮಟ್ಟ ಎಷ್ಟು ಕೆಳಮಟ್ಟದಲ್ಲಿದೆ ಎಂಬುದು ಅರ್ಥವಾಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಥರೈಟಿಸ್ ಬರದಂತೆ ತಡೆಯಲು ಈ ಮೂರು ಕೆಲಸ ತಪ್ಪದೇ ಮಾಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕನ್ನಡಕ್ಕಿಂತ ಪರಭಾಷೆಗಳಲ್ಲೇ ಇರುವ ಪ್ರಕಾಶ್ ರಾಜ್ ಗೆ ಯಾಕೆ ರಾಜ್ಯೋತ್ಸವ ಪ್ರಶಸ್ತಿ: ನೆಟ್ಟಿಗರ ತರಾಟೆ

ಮುಟ್ಟಾಗಿದ್ದು ನಿಜಾನಾ ಎಂದು ಮಹಿಳೆಯರ ಬಟ್ಟೆ ಬಿಚ್ಚಲು ಹೇಳಿದ ಮೇಲ್ವಿಚಾರಕ

ಕೋರ್ಟ್ ಹೇಳಿದ್ರೂ ಬೆಲೆಯಿಲ್ವಾ: ಪ್ರಿಯಾಂಕ್ ಖರ್ಗೆ ವಿರುದ್ಧ ನೆಟ್ಟಿಗರು ಕಿಡಿ

ಮುಂದಿನ ಸುದ್ದಿ
Show comments