Webdunia - Bharat's app for daily news and videos

Install App

ಫೋನ್ ಕದ್ದಾಲಿಕೆ ಆರೋಪದಿಂದ ನನ್ ಇಮೇಜ್ ಡ್ಯಾಮೇಜ್ ಎಂದ ಹೆಚ್.ಡಿ.ಕೆ?

Webdunia
ಭಾನುವಾರ, 18 ಆಗಸ್ಟ್ 2019 (20:55 IST)
ಫೋನ್‌ ಕದ್ದಾಲಿಕೆ ಆರೋಪದ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಮೇಜ್ ಗೆ ಡ್ಯಾಮೇಜ್ ಆಗ್ತಿದೆಯಾ?

ಯಾವ ತನಿಖೆ ಬೇಕಾದರೂ ಮಾಡಲಿ, ನಾನು ಸಹಕರಿಸುತ್ತೇನೆ. ಕುಮಾರಸ್ವಾಮಿ ತಪ್ಪು ಮಾಡಿದ್ದಾರೆ ಎಂದು ಯಾರೂ ಪ್ರೂವ್ ಮಾಡಕ್ಕಾಗಲ್ಲ ಅಂತ ಫೋನ್ ಕದ್ದಾಲಿಕೆ ಆರೋಪ ಕುರಿತು ಮಾಜಿ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.

ನನ್ನ‌ ಇಮೇಜ್ ನ್ನು ಯಾರಿಂದಲೂ ಹಾಳುಗೆಡವಲು ಸಾಧ್ಯವಿಲ್ಲ. ಬೇಕಾದರೆ ಅಮೇರಿಕೆ ಅಧ್ಯಕ್ಷ ಟ್ರಂಪ್ ಗೆ ಹೇಳಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನಿಖೆ ನಡೆಸಲಿ ಅಂತ ಸವಾಲು ಹಾಕಿದ್ರು.

ಸಿದ್ದರಾಮಯ್ಯರ ಮನವಿ ಮೇರೆಗೆ ಬಿ.ಎಸ್.ಯಡಿಯೂರಪ್ಪ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದಾರೆ. ಸಿದ್ದರಾಮಯ್ಯ ಪರವಾಗಿ ನಾನು ಬಿಎಸ್ ವೈಗೆ ಧನ್ಯವಾದ ಹೇಳುತ್ತೇನೆ ಅಂತ ಪರೋಕ್ಷವಾಗಿ ಟಾಂಗ್ ನೀಡಿದ್ರು.

ಈ ಹಿಂದೆ ಅಪ್ಪ -ಮಕ್ಕಳನ್ನು ಜೈಲಿಗೆ ಕಳಿಸುತ್ತಾರೆ ಅಂದಿದ್ದರು. ನಂತರ ಏನಾಯ್ತು ಅನ್ನುವುದು ಎಲ್ಲರಿಗೂ ಗೊತ್ತು ಅಂತ ಧರ್ಮಸ್ಥಳದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments