Publish Date: Wed, 14 Sep 2022 (20:51 IST)
Updated Date: Wed, 14 Sep 2022 (20:54 IST)
ಮಳೆ ಹಾನಿ ಪರಿಶೀಲನೆಗೆ ಬಂದಿದ್ದ ಕೇಂದ್ರ ತಂಡದ ಬಗ್ಗೆ ಎಚ್ ಡಿ ಕುಮಾರಸ್ವಾಮಿಗೆ ಅಸಮಾಧಾನವಿದೆ.ಕೇಂದ್ರ ತಂಡ ಬಂದ ಪುಟ್ಟ ಹೋದ ಪುಟ್ಟ ಆದ್ವಾ ಎಂದು ಗೊತ್ತಿಲ್ಲ.ಕೇಂದ್ರ ತಂಡದ ಮುಂದೆ ಜನರು ಹಾವೇರಿಯಲ್ಲಿ ಪರಿಹಾರ ಕೊಡಿಸಿ ಇಲ್ಲಾಂದ್ರೆ ವಿಷ ಸೇವಿಸುವ ಪರಿಸ್ಥಿತಿ ಇದೆ ಎಂದು ಅಳಲು ತೋಡಿಕೊಂಡಿದ್ದಾರೆ.
ಶಿಗ್ಗಾವಿ ತಾಲ್ಲೂಕಿನಲ್ಲಿ ಕೇಂದ್ರ ತಂಡದ ಪರಿಶೀಲನೆಗೆ ರೈತರು ಅಸಮಾಧಾನಗೊಂಡಿದ್ದರು.ಪತ್ರಿಕೆಯಲ್ಲಿ ಈ ಬಗ್ಗೆ ವರದಿ ಬಂದಿದೆ .ಬೆಳೆ ನಷ್ಟ ಬಗ್ಗೆ ಹೊಲಕ್ಕೆ ಬಾರದೆ ರಸ್ತೆಯಲ್ಲೇ ನಿಂತು ಪರಿಶೀಲನೆ ನಡೆಸಿದ್ದಾರೆ.ಈ ಬಗ್ಗೆ ರೈತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.ಹೀಗಾದರೆ ಎಷ್ಟರ ಮಟ್ಟಿಗೆ ಕೇಂದ್ರ ಸರ್ಕಾರಕ್ಕೆ ವರದಿ ಕೊಡುತ್ತಾರೆ? ಎಂದು ಸಿಎಂ ಪ್ರಶ್ನೆ ಮಾಡಿದ್ದಾರೆ.