ಅಶೋಕ್​​ ವಿರುದ್ಧ HDK ತೀವ್ರ ವಾಗ್ದಾಳಿ

Webdunia
ಗುರುವಾರ, 27 ಅಕ್ಟೋಬರ್ 2022 (16:58 IST)
SC/STಯವರಿಗೆ ಮೀಸಲಾತಿಯನ್ನು ನಮ್ಮ ಗಂಡೆದೆ ಸಿಎಂ ಬೊಮ್ಮಾಯಿ ಅವರಿಂದ ಮಾತ್ರ ಕೋಡೊಕೆ ಸಾಧ್ಯ ಆಯ್ತು ಎಂದು ಸಚಿವ ಅಶೋಕ್ ಹೇಳಿದ್ರು. ಈ ವಿಚಾರದ ಕುರಿತಾಗಿ ಮಾಜಿ ಸಿಎಂ H.D.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗಂಡೆದೆ ಮುಖ್ಯಮಂತ್ರಿ ಆಗಿದ್ದವರು‌ ಎರಡು ವರ್ಷ ಯಾಕೆ ಮೀಸಲಾತಿ ಹೆಚ್ಚಳ ಮಾಡಲಿಲ್ಲ.. ಇದೊಂದು ಚುನಾವಣೆ ಸ್ಟಂಟ್ ಅಷ್ಟೆ. ST ಸಮುದಾಯಕ್ಕೆ ಮೀಸಲಾತಿ ಅಂತ ಕೊಟ್ಟವರು ದೇವೇಗೌಡರು.ದೇವೇಗೌಡ ಮುಂದೆ ಯಾವುದೇ ಗಂಡೆದೆ ಮುಖ್ಯಮಂತ್ರಿ ಇಲ್ಲ ಎಂದು ವಾಗ್ದಾಳಿ ನಡೆಸಿದ್ರು. ಮುಂದುವರಿದು ಮಾತನಾಡಿದ ಅವರು ಚುನಾವಣೆ ಹತ್ತಿರ ಬಂದಾಗ ಮೀಸಲಾತಿ ಕೊಟ್ಟಿದ್ದಾರೆ. ಇವರಿಗೆ ಗಂಡೆದೆ ಇದ್ದಿದ್ದರೆ ಪ್ರಸನ್ನಾನಂದಪುರಿ ಸ್ವಾಮೀಜಿಯನ್ನು ಯಾಕೆ 252 ದಿನ ಧರಣಿ ಕೂರಿಸುತ್ತಿದ್ದರು ಎಂದು ಪ್ರಶ್ನೆ ಮಾಡಿದ್ದಾರೆ. ಅವರು ಮೀಸಲಾತಿ ನೀಡಿದ್ರಲ್ಲಿ ನಮ್ಮ ಸಹಕಾರವೂ ಇದೆ. ನಮ್ಮ ಸಹಕಾರದಿಂದ ಅವರ ಗಂಡೆದೆ ಹೊರ ಬಂದಿದೆ. ಇಲ್ಲದೆ ಹೋಗಿದ್ರೆ ಹೆಣ್ಣೆದೆ ಹೊರಗೆ ಬರ್ತಿತ್ತು ಎಂದ HDK ತಕ್ಷಣ ಮಾತು ಬದಲಿಸಿ ನನಗೆ ಹೆಣ್ಣು ಮಕ್ಕಳ ಬಗ್ಗೆ ಗೌರವ ಇದೆ ಎಂದು ಮಾತನ್ನು ತೇಲಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿನಲ್ಲಿ ಡಿಕೆಶಿ ಜತೆಗೆ ರಾಹುಲ್ ಆಡಿದ ಮಾತಿನ ಬಗ್ಗೆ ಡಿಕೆ ಸುರೇಶ್ ಹೀಗಂದ್ರು

ರಿಯಲ್ ಎಸ್ಟೇಟ್ ಕಚೇರಿಗಳಂತಾದ ಪೊಲೀಸ್ ಇಲಾಖೆ: ಅಶ್ವತ್ಥನಾರಾಯಣ್

ಮೈಕ್‌ ಆಫ್ ಮಾಡಿ ರಾಷ್ಟ್ರಗೀತೆಗೆ ಅಪಮಾನ, ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ

ರಾಸಲೀಲೆ ಪ್ರಕರಣದಲ್ಲಿ ಅಮಾನತುಗೊಂಡಿರುವ ಡಿಜಿಪಿ ರಾಮಚಂದ್ರ ರಾವ್ ಅವರ ವೈಯ್ಯಕ್ತಿಕ ಬದುಕು ಹೀಗಿದೆ

ಕರುಣೆಯಲ್ಲಿ ವಿಚಾರಿಸಲು ಹೋಗಿ ಭಿಕ್ಷುಕನ ಆಸ್ತಿ ನೋಡಿ ದಂಗಾದ ಅಧಿಕಾರಿಗಳು

ಮುಂದಿನ ಸುದ್ದಿ
Show comments