ಅಮಿತ್​ ಶಾ ವಿರುದ್ಧ HDK ಆಕ್ರೋಶ

Webdunia
ಭಾನುವಾರ, 1 ಜನವರಿ 2023 (15:45 IST)
ಗುಜರಾತ್​​​ನ ಅಮುಲ್​ ಡೇರಿ ಮತ್ತು ಕರ್ನಾಟಕ ಹಾಲು ಮಹಾಮಂಡಳಿ KMF ವಿಲೀನ ಕುರಿತು ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್​​​ ಶಾ ಮಾತನಾಡಿದ್ದರು. ಇದಕ್ಕೆ ಮಾಜಿ ಸಿಎಂ H.D ಕುಮಾರಸ್ವಾಮಿ ಆಕ್ಷೇಪವೆತ್ತಿದ್ದಾರೆ. ಈ ಕುರಿತು ಇಂದು ಸರಣಿ ಟ್ವೀಟ್​​ ಮಾಡಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ BJP ಸರ್ಕಾರ ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ ಎಂದು ಕಿಡಿಕಾರಿದ್ದಾರೆ. ಕರ್ನಾಟಕ ರಾಜ್ಯವನ್ನು ಗುಜರಾತ್ ಮಾಡುವ ಧೂರ್ತ ಹುನ್ನಾರ ಇದು. ಅಷ್ಟೇ ಅಲ್ಲ, ಗುಜರಾತ್​​ಗೆ ಕರ್ನಾಟಕವೇ ಪ್ರತಿಸ್ಪರ್ಧಿ ಎನ್ನುವ ಕಾರಣಕ್ಕೆ ಅಭಿವೃದ್ಧಿಯಲ್ಲಿ ಕರ್ನಾಟಕವನ್ನು ಮುಗಿಸೇಬಿಡಬೇಕು ಎನ್ನುವ ದುರಾಲೋಚನೆ ಅಮಿತ್ ಶಾ ಅವರಿಗೆ ಸ್ಪಷ್ಟವಾಗಿ ಇದ್ದಂತಿದೆ. ಕನ್ನಡ ನೆಲದ ಮಣ್ಣಿನ ಮಕ್ಕಳ ಜೀವನಾಡಿ ಕರ್ನಾಟಕ ಹಾಲು ಮಹಾ ಮಂಡಳಿಯನ್ನು ಗುಜರಾತಿನ ಅಮುಲ್​​​ನಲ್ಲಿ ವಿಲೀನ ಮಾಡುವ ಹೇಳಿಕೆ ನೀಡಿರುವುದು ಕನ್ನಡಿಗರಿಗೆ ಮಾಡಲು ಹೊರಟಿರುವ ಘೋರ ಅನ್ಯಾಯ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ನೀವೇ ಬೇಡ ಹೇಳಿ: ಸಚಿವ ಎಂಬಿ ಪಾಟೀಲ್ ರಿಕ್ವೆಸ್ಟ್

ಯುದ್ಧ ನಿಲ್ಲಿಸಿ.. ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಕರೆ ಮಾಡಿದ ಪ್ರಧಾನಿ ಮೋದಿ

Karnataka Weather: ಈ ವಾರದ ಹವಾಮಾನ ವರದಿ ನಿಜಕ್ಕೂ ಬೆವರಿಳಿಸುವಂತಿದೆ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments