Webdunia - Bharat's app for daily news and videos

Install App

ಕರಾವಳಿ ತೀರದ ಹಿಂಸಾಚಾರದಲ್ಲಿ ಕಾಂಗ್ರೆಸ್, ಬಿಜೆಪಿ ಕೈವಾಡ: ಕುಮಾರಸ್ವಾಮಿ

Webdunia
ಭಾನುವಾರ, 7 ಜನವರಿ 2018 (13:48 IST)
ಕರಾವಳಿ ತೀರದಲ್ಲಿ ನಡೆಯುತ್ತಿರುವ ಹಿಂಸಾಚಾರಗಳ ಹಿಂದೆ ಕಾಂಗ್ರೆಸ್, ಬಿಜೆಪಿ ಕೈವಾಡವಿದ್ದು, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಕ್ರೂಢಿಕರಿಸುವ ಯತ್ನ ನಡೆಯುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ತೀರದಲ್ಲಿ ನಡೆಯುತ್ತಿರುವ ಹಿಂದು ಮುಸ್ಲಿಮರ ಹತ್ಯೆಗಳನ್ನು ಎರಡು ರಾಷ್ಟ್ರೀಯ ಪಕ್ಷಗಳು ರಾಜಕಾರಣಗೊಳಿಸುತ್ತಿವೆ. ವಿಚ್ಚಿದ್ರಕಾರಿ ಶಕ್ತಿಗಳಿಗೆ ಉತ್ತೇಜನ ನೀಡುತ್ತಿವೆ ಎಂದು ಕಿಡಿಕಾರಿದರು.
 
ಇತ್ತೀಚೆಗೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ನಿವಾಸಿ ಪರೇಶ್ ಮೆಸ್ತಾ ಮತ್ತು ಮಂಗಳೂರಿನ ದೀಪಕ್ ರಾವ್ ಪೋಷಕರು ತಮ್ಮ ಪುತ್ರ ಬಿಜೆಪಿ ಅಥವಾ ಯಾವುದೇ ಬಿಜೆಪಿ ಪರ ಸಂಘಟನೆಗೆ ಸೇರಿರಲಿಲ್ಲ ಎಂದು ಹೇಳಿದ್ದಾರೆ. ಆದರೆ, ಬಿಜೆಪಿ ಅವರು ತಮ್ಮ ಪಕ್ಷದ ಕಾರ್ಯಕರ್ತರು ಎಂದು ಹೇಳುತ್ತಿರುವುದು ನಾಚಿಕೆಗೇಡಿತನದ ಸಂಗತಿ ಎಂದು ವಾಗ್ದಾಳಿ ನಡೆಸಿದರು.
 
ಕೇಂದ್ರ ಸಚಿವರಾದ ಅನಂತ್ ಕುಮಾರ್ ಹೆಗಡೆ ಮತ್ತು ಮೈಸೂರು-ಕೊಡಗು ಸಂಸದರಾದ ಪ್ರತಾಪ್ ಸಿಂಹ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ. ಇಂತಹ ನಾಯಕರ ವಿರುದ್ಧ ಸರಕಾರ ಕಠಿಣ ಕ್ರಮಕೈಗೊಳ್ಳಬೇಕಾಗಿದೆ. ಆದರೆ. ಸರಕಾರ ರಾಜಕಾರಣಕ್ಕಾಗಿ ಹೊಂದಾಣಿಕೆಯ ರಾಜಕಾರಣ ಮಾಡುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದಿಂದಲೇ ಬಂದಿರುವುದಕ್ಕೆ ಏನು ಪ್ರೂಫ್: ಕೈ ನಾಯಕ ಚಿದಂಬರಂ

Operation Mahadev: ಪಹಲ್ಗಾಮ್ ಕುಕೃತ್ಯ ನಡೆಸಿದ ಮೂವರು ಶಂಕಿತ ಉಗ್ರರು ಮಟಾಷ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಧರ್ಮಸ್ಥಳ ಪ್ರಕರಣದಲ್ಲಿ ತೀವ್ರ ಬೆಳವಣಿಗೆ: ನೇತ್ರಾವತಿ ನದಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

ಸರಕಾರ ನಡೆಸಲು ಬಾರದ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ

ಮುಂದಿನ ಸುದ್ದಿ