ಇರುಮುಡಿ ಹೊತ್ತು ಅಯ್ಯಪ್ಪನ ದರ್ಶನ ಮಾಡಿದ ಎಚ್ಡಿಕೆ

Webdunia
ಬುಧವಾರ, 16 ನವೆಂಬರ್ 2016 (15:53 IST)
ಶಬರಿಮಲೆ: ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಇಂದು ಬೆಳಗ್ಗೆ ಶಬರಿಮಲೆಗೆ ಹೋಗಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದಿದ್ದಾರೆ.
ಅಯ್ಯಪ್ಪನ ಭಕ್ತರಾಗಿರುವ ಅವರು 2005 ಮತ್ತು 20016ರಲ್ಲಿಯೂ ಅಯ್ಯಪ್ಪನ ದರ್ಶನ ಪಡೆದಿದ್ದರು. ಅದಾದ ಬಳಿಕ ಬರೋಬ್ಬರಿ ಹತ್ತು ವರ್ಷದ ನಂತರ ಅವರು ಇಂದು ಮುಂಜಾನೆ ಶಬರಿಮಲೆಗೆ ಭೇಟಿ ನೀಡಿದ್ದರು.
 
ಯ್ಯಪ್ಪ ಭಕ್ತಾದಿಗಳು ಆಚರಿಸುವ ವೃತಾಚರಣೆಯನ್ನು ಸೀಮಿತವಾಗಿ ಮಾಡಿ, ಕೆಲವು ನಿಯಮವನ್ನು ಪಾಲಿಸಿ ಶಬರಿ ಮಲೆಗೆ ಹೋಗಿದ್ದಾರೆ. ಮುಂಜಾನೆ ಐದರ ವೇಳೆ ಎದ್ದು ಪಂ.ಪಾನದಿಯಲ್ಲಿ ಸ್ನಾನ ಮಾಡಿ ಕಪ್ಪು ಬಟ್ಟೆ ಧರಿಸಿ ಅಯ್ಯಪ್ಪನ ನಾಮ ಸ್ಮರಣೆ ಮಾಡುತ್ತ ಕಾಲುದಾರಿಯಲ್ಲಿಂದು ತೆರಳಿದ್ದಾರೆ. 
 
ತಲೆ ಮೇಲೆ ಇರುಮುಡಿ ಹೊತ್ತು ಸಾಗಿದ ಅವರ ಜೊತೆಗೆ ನಾಲ್ಕೈದು ಅಯ್ಯಪ್ಪ ಭಕ್ತರು ಇದ್ದರು. ಅಯ್ಯಪ್ಪನ ದರ್ಶನ ಪಡೆದು ಭಕ್ತರ ಸಾಲಿನಲ್ಲಿಯೇ ಅವರು ಹಿಂತಿರುಗಿ ಬಂದಿದ್ದಾರೆ. ಇದೇ ನ. 18ರಂದು ಅವರು ಹುಬ್ಬಳ್ಳಿಯಲ್ಲಿ ನೂತನ ಮನೆಗೆ ಪ್ರವೇಶ ಮಾಡುವ ಹಾಗೂ ಚುನಾವಣಾ ಹಿನ್ನೆಲೆಯಲ್ಲಿ ಭೇಟಿ ನೀಡಿದ್ದರು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments