Webdunia - Bharat's app for daily news and videos

Install App

ಈ ಕಾರಣಕ್ಕೆ ಪ್ರೀತಿಸುತ್ತಿದ್ದ ಹುಡುಗಿಯ ತಂದೆಯನ್ನೇ ಕೊಂದ

Webdunia
ಗುರುವಾರ, 8 ಅಕ್ಟೋಬರ್ 2020 (08:27 IST)
ಕಲಬುರಗಿ : ಪ್ರಕರಣ ದಾಖಲಿಸಿದ್ದಕ್ಕೆ ಪ್ರೀತಿಸುತ್ತಿದ್ದ ಹುಡುಗಿಯ ತಂದೆಯನ್ನು  21 ವರ್ಷದ ಯುವಕ ಹಾಗೂ ಆತನ ಸ್ನೇಹಿತ ಕೊಲೆ ಮಾಡಿದ ಘಟನೆ ಕಮಲಾಪುರ ತಾಲೂಕಿನ ದಿನಸಿ ತಾಂಡಾದಲ್ಲಿ ನಡೆದಿದೆ.

ಮಹೇಶ್ ಮತ್ತು ಸುಭಾಷ್ ರಾಥೋಡ್ ಕೊಲೆ ಮಾಡಿದ ಆರೋಪಿಗಳು. ಆರೋಪಿ ಮಹೇಶ್  ಮೃತಪಟ್ಟ ವ್ಯಕ್ತಿಯ ಹದಿಹರೆಯದ ಮಗಳಿಗೆ  ಪ್ರೀತಿಯ ವಿಚಾರಲ್ಲಿ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ತಂದೆ ಅವನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ ಮಹೇಶ್ ಅವರ ಮಗಳನ್ನು ಮದುವೆಯಾಗುವುದಾಗಿ ಹೇಳಿ ದೂರು ವಾಪಾಸ್ ಪಡೆಯುವಂತೆ ಹೇಳಿದ್ದು,  ಅದರಂತೆ ತಂದೆ ದೂರು ವಾಪಾಸ್ ಪಡೆದಿದ್ದರು.

ಆದರೆ ಬಳಿಕ ಆರೋಪಿಯ ಬಳಿ ಮದುವೆ ಪ್ರಸ್ತಾಪ ಮಾಡಿದಾಗ ಆತ ನಿರಾಕರಿಸಿದ್ದಾನೆ. ಆದಕಾರಣ ಹುಡುಗಿಯ ತಂದೆ ದೂರು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಹಿನ್ನಲೆಯಲ್ಲಿ ತನ್ನ ಸ್ನೇಹಿತನ ಜೊತೆ ಮನೆಗೆ ನುಗ್ಗಿದ ಮಹೇಶ್ ಹುಡುಗಿಯ ತಂದೆಯನ್ನು ಕೊಲೆ ಮಾಡಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments