Webdunia - Bharat's app for daily news and videos

Install App

ಪೊಲೀಸರಂತೆ ನಟಿಸಿದ್ರು: ಚಿನ್ನಾಭರಣ ದೋಚಿದ್ರು

Webdunia
ಬುಧವಾರ, 30 ಜನವರಿ 2019 (18:53 IST)
ಮತ್ತೆ ಪೊಲೀಸರ ಹೆಸರು ಹೇಳಿಕೊಂಡು ಬಂದ ದುಷ್ಕರ್ಮಿಗಳಿಬ್ಬರು ವ್ಯಕ್ತಿಯೋರ್ವರ ಮೈಮೇಲಿದ್ದ ಚಿನ್ನದ ಆಭರಣಗಳನ್ನು ಕದ್ದು ಯಾಮಾರಿಸಿರುವ ಘಟನೆ ನಡೆದಿದೆ.

ವ್ಯಕ್ತಿಯೊಬ್ಬರ ಮೈಮೇಲಿದ್ದ ಚಿನ್ನದ ಆಭರಣಗಳನ್ನು  ಬಿಚ್ಚಿಸಿ ಕರ್ಚೀಪ್ ನಲ್ಲಿ ಕಟ್ಟಿಸಿ ವಂಚಿಸಿ ಪರಾರಿಯಾದ ಘಟನೆ ಬೆಂಗಳೂರಿನ ಜೆಎಸ್ ಎಸ್ ಆಸ್ಪತ್ರೆಯ ಬಳಿ ನಡೆದಿದೆ.

ನಂಜನಗೂಡು ನಿವಾಸಿ ಗೋಪಾಲ್(50) ಎಂಬವರು ಬೆಳಿಗ್ಗೆ ಜೆಎಸ್ ಎಸ್ ಆಸ್ಪತ್ರೆ ಬಳಿ ಇರುವ ಲ್ಯಾಬ್ ಗೆ ಬಂದಿದ್ದರು.  ಅದೇ ವೇಳೆ ಬೈಕಿನಲ್ಲಿ ಬಂದ ವ್ಯಕ್ತಿಗಳಿಬ್ಬರು ತಾವು ಪೊಲೀಸರು, ನಿಮ್ಮ ಮೈಮೇಲಿದ್ದ ಚಿನ್ನದ ಆಭರಣಗಳನ್ನು ಬಿಚ್ಚಿಕೊಡಿ. ಕರ್ಚೀಫ್ ನಲ್ಲಿ ಕಟ್ಟಿಕೊಡುತ್ತೇವೆ ಎಂದು ಹೇಳಿದ್ದಾರೆ. ಅವರು ಹೇಳಿದ್ದಕ್ಕೆ ಮರು ಪ್ರಶ್ನಿಸದೇ ಗೋಪಾಲ್ 20ಗ್ರಾಂ ತೂಕದ ಚಿನ್ನದ ಚೈನು ಮತ್ತು 15ಗ್ರಾಂ ತೂಕದ ಉಂಗುರವನ್ನು ಬಿಚ್ಚಿ ಕೊಟ್ಟಿದ್ದಾರೆ.

ದುಷ್ಕರ್ಮಿಗಳು ಅವರ ಕರ್ಚೀಪ್ ಮತ್ತೆ ಅವರಿಗೆ ಮರಳಿ ನೀಡದೆ ಎಗರಿಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಕೂಡಲೇ ಕೆ.ಆರ್.ಪೊಲೀಸ್ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಇನ್ಸಪೆಕ್ಟರ್ ಪ್ರಕಾಶ್, ಸಬ್ ಇನ್ಸಪೆಕ್ಟರ್ ಸುನಿಲ್, ಸಿಬ್ಬಂದಿಗಳಾದ ಲಕ್ಷ್ಮಿನಾರಾಯಣ್ ಆಗಮಿಸಿ ಸುತ್ತಮುತ್ತಲ ಅಂಗಡಿಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಫುಟೇಜ್ ಗಳನ್ನು ಪರಿಶೀಲನೆ ನಡೆಸಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments