Webdunia - Bharat's app for daily news and videos

Install App

ಬಂಡೆಯಾಗಿರುತ್ತೇನೆಂದು ನನ್ನ ಮೇಲೆಯೇ ಬಂಡೆ ಹಾಕಿದ್ದರು: ಡಿಕೆಶಿ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ

Sampriya
ಶನಿವಾರ, 10 ಆಗಸ್ಟ್ 2024 (19:47 IST)
Photo Courtesy X
ಮೈಸೂರು: ನಾನು ಸಿಎಂ ಆಗಿದ್ದಾಗ ಬಂಡೆಯಾಗಿ ನಿಲ್ಲುತ್ತೇನೆಂದು ಹೇಳಿದ್ದ ಡಿಕೆಶಿ ನನ್ನ ಮೇಲೆಯೇ ಬಂಡೆ ಹಾಕಿದ್ದರು. ಇದೀಗ ಸಿಎಂ ಸಿದ್ದರಾಮಯ್ಯಗೇ ಅದೇ ಭರವಸೆಯನ್ನು ನೀಡುತ್ತಿದ್ದು, ಅವರ ಕತೆ ಸಹ ಮುಗಿಯಿತು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ನಗರದಲ್ಲಿ ನಡೆದ ಬೆಂಗಳೂರು-ಮೈಸೂರು ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನ ಗೆದ್ದಿದ್ದೇನೆಂದು ಹೇಳಿದ್ದಾರೆ. ನಾನು 19 ಸ್ಥಾನ ಅಷ್ಟೇ ಗೆಲ್ಲೋದಕ್ಕೆ ಸಾಧ್ಯವಾಗಿದ್ದು ಅಂತ ಹೇಳುತ್ತಿರುವ ಡಿಕೆಶಿ ಅವರು ಲೋಕಸಭೆ ಚುನಾವಣೆಯಲ್ಲಿ ಯಾಕೆ ಕಡಿಮೆ ಗೆದ್ದದ್ದು, ರಾಜಕೀಯದಲ್ಲಿ ಏಳುಬೀಳು ಇದ್ದಿದ್ದೆ ಎಂದು ಕಿಡಿಕಾರಿದರು.

ತನ್ನ ಬದುಕಿನಲ್ಲಿ ಒಂದೇ ಒಂದು ಕಪ್ಪು ಚುಕ್ಕೆಯಿಲ್ಲ ಎನ್ನುವ ಸಿಎಂ ಸಿದ್ದರಾಮಯ್ಯ ಅವರು ತನ್ನ ಚಡ್ಡಿಯೆಲ್ಲ ಕಪ್ಪು ಮಾಡಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದ ಎಚ್‌ಡಿಕೆ,  ನನ್ನ ಅಣ್ಣನ ಮಗನನ್ನು ನಾನು ಜೈಲಿಗೆ ಕಳುಹಿಸಿದ್ದೀನಿ ಅಂದಿದ್ದೀರಿ ಶಿವಕುಮಾರ್. ಮಿಸ್ಟರ್ ಶಿವಕುಮಾರ್, ನಾನು ಚಾಮುಂಡೇಶ್ವರಿ ಸನ್ನಿದಾನದಲ್ಲಿ ನಿಂತು ಮಾತಾಡ್ತಿದ್ದೇನೆ. ಕಾಫಿ ಡೇ ಸಿದ್ದಾರ್ಥ ಸಾವಿಗೆ ಕಾರಣ ಯಾರು ಅಂತಾ ಹೇಳ್ತೀರಾ ಎಂದು ಪ್ರಶ್ನೆ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ಮುಂದಿನ ಸುದ್ದಿ
Show comments