Webdunia - Bharat's app for daily news and videos

Install App

ರೇಪ್ ಕೇಸ್ ನಲ್ಲಿ ಜೈಲಿಗೆ ಹೋಗಿ ಬಂದ ಮತ್ತದೇ ಕೆಲಸ ಮಾಡಿ ಸಿಕ್ಕಿಬಿದ್ದ

geetha
ಭಾನುವಾರ, 14 ಜನವರಿ 2024 (15:24 IST)
ಬೆಂಗಳೂರು-ಈ ಹಿಂದೆ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಜೈಲು ಸೇರಿದ್ದ ಯುವಕನೋರ್ವ ಜೈಲಿನಿಂದ ಬಿಡುಗಡೆಯಾಗಿ ಹೊರಬಂದ ಬಳಿಕ ಮತ್ತೆ ಅದೇ ಆರೋಪದ ಮೇಲೆ ಬಂಧಿತನಾಗಿದ್ದಾನೆ. 
 
ದೊಡ್ಡಬಳ್ಳಾಪುರದ ಬೆಳವಂಗಲ ನಿವಾಸಿ ಆನಂದ್‌ (24) ಬಂಧಿತ ಆರೋಪಿ.  ತ್ಯಾಮಗೊಂಡ್ಲುವಿನಿಂದ ಯಲಹಂಕಕ್ಕೆ ಬರುತ್ತಿದ್ದ ಶಾಲಾ ಬಾಲಕಿಯೋರ್ವಳನ್ನು ಈತ ಪುಸಲಾಯಿಸಿ ಯಲಹಂಕದಲ್ಲಿ ರೂಮ್‌ ಒಂದರಲ್ಲಿ ಇರಿಸಿ ಸತತವಾಗಿ ಅತ್ಯಾಚಾರವೆಸಗಿದ್ದಾನೆ. ವಿದ್ಯಾರ್ಥಿನಿ ಕಾಣೆಯಾದ  ಬಗ್ಗೆ ಆಕೆಯ ಪೋಷಕರು ದಾಬಸ್‌ ಪೇಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. 
 
ಈ ಹಿಂದೆ ಬೆಂಗಳೂರು ನಗರದ ಬ್ಯಾಡರಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಆನಂದ್‌ ಜೈಲು ಶಿಕ್ಷೆ ಅನುಭವಿಸಿ ಹೊರ ಬಂದಿದ್ದ.  ಆಗ ಅವನಿಗೆ ಕೇವಲ 19 ವರ್ಷ ವಯಸಾಗಿತ್ತು. ಈಗ ಮತ್ತೆ ಅದೇ ರೀತಿಯ ಪ್ರಕರಣದಲ್ಲಿ ಆನಂದ್‌ ಜೈಲು ಸೇರಿದ್ದಾನೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments