Webdunia - Bharat's app for daily news and videos

Install App

ಮದ್ಯ ಸೇವಿಸಲು ಹಣವಿಲ್ಲದ ಹೆಡ್ ಮಾಸ್ಟರ್ ಮಾಡಿದ್ದೇನ್ ಗೊತ್ತಾ..?

Webdunia
ಮಂಗಳವಾರ, 31 ಅಕ್ಟೋಬರ್ 2017 (14:44 IST)
ಮೈಸೂರು: ಸರ್ಕಾರಿ ಶಾಲೆ ಮುಖ್ಯ ಶಿಕ್ಷಕನೊಬ್ಬ ಮದ್ಯಕ್ಕಾಗಿ ಬಿಸಿಯೂಟದ ಅಕ್ಕಿ ಮಾರಲು ಯತ್ನಿಸಿರುವ ಘಟನೆ ಹೆಚ್.ಡಿಕೋಟೆ ತಾಲೂಕಿನ ರಾಜೇಗೌಡನಹುಂಡಿಯಲ್ಲಿ ನಡೆದಿದೆ.

ರಾಜೇಗೌಡನಹುಂಡಿಯ ಸರ್ಕಾರಿ ಪ್ರಾಥಮಿಕ ಶಾಲೆಯ ರಾಜಶೆಟ್ಟಿ ಎಂಬಾತನೇ ಅಕ್ಕಿ ಮಾರಲು ಯತ್ನಿಸಿ, ಸಿಕ್ಕಿಬಿದ್ದ ಮುಖ್ಯ ಶಿಕ್ಷಕ. ಶಾಲೆ ಸಮಯ ಮುಗಿದ ಬಳಿಕ ರಾಜಶೆಟ್ಟಿ ಶಾಲೆಗೆ ಭೇಟಿ ನೀಡಿದ್ದಾನೆ.

ಶಾಲೆಯಲ್ಲಿ ಅಕ್ಕಿಯಿದ್ದ ಕೊಠಡಿ ಬೀಗ ತೆಗೆದು ಸುಮಾರು 1 ಕ್ವಿಂಟಾಲ್ ಅಕ್ಕಿ ಮೂಟೆ ಮಾರಾಟ ಮಾಡಲು ಯತ್ನಿದ್ದಾನೆ. ಈ ವೇಳೆ ಗ್ರಾಮಸ್ಥರು ಅಕ್ಕಿ ಸಮೇತ ಮುಖ್ಯಶಿಕ್ಷಕನನ್ನು ಹಿಡಿದಿದ್ದಾರೆ.
ಗ್ರಾಮಸ್ಥರು ಸ್ಥಳಕ್ಕೆ ಬರುತ್ತಿದ್ದಂತೆ ವಸರೆ ಬದಲಿಸಿದ ಮುಖ್ಯಶಿಕ್ಷಕ, ಅಕ್ಕಿ ಖಾಲಿಯಾಗಿದ್ದ ಸಂದರ್ಭದಲ್ಲಿ ಸಾಲ ಮಾಡಿದ್ದೆ. ಹೀಗಾಗಿ ಆ ಅಕ್ಕಿಯನ್ನು ಇದೀಗ ವಾಪಸ್ ನೀಡಲು ಮುಂದಾಗಿದ್ದೇನೆ ಎಂದು ರಾಜಶೆಟ್ಟಿ ಸಬೂಬು ಹೇಳಿದ್ದಾನೆ.

ಗ್ರಾಮಸ್ಥರು ಮುಖ್ಯ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಟ್ಟು ಹಿಡಿದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಿಇಒ ಸುಂದರ್, ಗ್ರಾಮಸ್ಥರ ಆರೋಪದ ಮೇಲೆ ಮುಖ್ಯಶಿಕ್ಷಕ ರಾಜಶೆಟ್ಟಿಗೆ ನೋಟಿಸ್ ನೀಡಿದ್ದಾರೆ. ಮುಖ್ಯಶಿಕ್ಷಕ ಮದ್ಯ ಸೇವನೆ ಬಗ್ಗೆ ಪೋಷಕರು ಬಿಇಒಗೆ ದೂರು ನೀಡಿದ್ದಾರೆ. ರಾಜಶೆಟ್ಟಿ ಮೇಲೆ ಇಲಾಖಾ ತನಿಖೆಗೂ ಬಿಇಒ ಆದೇಶಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments