Webdunia - Bharat's app for daily news and videos

Install App

ಆರೋಗ್ಯ ಕಾಪಾಡುವುದು ಅಗತ್ಯ

Webdunia
ಮಂಗಳವಾರ, 25 ಜನವರಿ 2022 (16:55 IST)
ರಾಜ್ಯದಲ್ಲಿ ಸುಮಾರು 2 ಲಕ್ಷ ಮಂದಿ ವೈದ್ಯ ಶಿಕ್ಷಣ ಪಡೆಯುತ್ತಿದ್ದಾರೆ. ಇವರನ್ನು ಬಳಸಿಕೊಂಡು ಮಾನಸಿಕ ಅನಾರೋಗ್ಯಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಈ ಪ್ರಾಯೋಗಿಕ ಕಾರ್ಯಕ್ರಮವನ್ನು ಉತ್ತಮವಾಗಿ ಜಾರಿ ಮಾಡಿ ಸರ್ಕಾರಕ್ಕೆ ವರದಿ ನೀಡಬೇಕು. ನಂತರ ಮುಂದಿನ ಬಜೆಟ್​ನಲ್ಲಿ ಈ ಕಾರ್ಯಕ್ರಮಕ್ಕಾಗಿ ಹೆಚ್ಚು ಅನುದಾನ ಮೀಸಲಿಡಬಹುದು ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕೊವಿಡ್ ಸಂದರ್ಭದಲ್ಲಿ ನಿಮ್ಹಾನ್ಸ್ ನೇತೃತ್ವದಲ್ಲಿ, ಅನೇಕ ಕೊರೊನಾ ರೋಗಿ ಹಾಗೂ ಕುಟುಂಬದವರ ಮಾನಸಿಕ ಆರೋಗ್ಯ ನಿರ್ವಹಣೆಗೆ ಒತ್ತು ನೀಡಲಾಯಿತು. ಕೆಲ ಪ್ರಕರಣಗಳಲ್ಲಿ ಆತ್ಮಹತ್ಯೆಯ ಘಟನೆಯೂ ನಡೆಯಿತು. ಆ ವೇಳೆ ಅನೇಕರಿಗೆ ಮಾನಸಿಕ ಆರೋಗ್ಯ ಆಪ್ತ ಸಮಾಲೋಚನೆ ಸೇವೆ ನೀಡಲಾಯಿತು. ಇದನ್ನು ಇನ್ನಷ್ಟು ಮುಂದುವರಿಸಲಾಗುತ್ತಿದೆ. ಮಾನಸಿಕ ಆರೋಗ್ಯವು ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಂಶ. ಮೆದುಳಿನ ಆರೋಗ್ಯ ಇಡೀ ದೇಹದ ಒಟ್ಟು ಆರೋಗ್ಯ ಕಾಪಾಡಲು ಅಗತ್ಯವಾಗಿದೆ. ನಿಮ್ಹಾನ್ಸ್ ಜನರ ಬಳಿಯೇ ಹೋಗಿ ಆರೋಗ್ಯ ಸೇವೆ ನೀಡುವಂತಹ ಪ್ರತಿಷ್ಠಿತ ಸಂಸ್ಥೆಯಾಗಿದೆ. ಸಾಮಾನ್ಯ ಫಿಸಿಶೀಯನ್ ಕೂಡ ಮಾನಸಿಕ ಆರೋಗ್ಯ ಸೇವೆ ನೀಡುವಂತೆ ನಿಮ್ಹಾನ್ಸ್ ತರಬೇತಿ ನೀಡಲಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments