ಬೆಂಗಳೂರು: ರಾಜ್ಯ ಆರೋಗ್ಯ ಸಚಿವ ರಮೇಶ್ ಕುಮಾರ್ ಅವರು ಅನಾರೋಗ್ಯಕ್ಕೊಳಗಾಗಿದ್ದು, ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ರಮೇಶ್ ಕುಮಾರ್ ಗೆ ಅಲ್ಲಿನ ಊಟ ಹಿಡಿಸದೆ ಈ ರೀತಿಯಾಗಿಬರಬಹುದೆಂದು ವೈದ್ಯರು ಹೇಳಿದ್ದಾರೆ. ಸದ್ಯ ಬೌರಿಂಗ್ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿಗಳು ಸಚಿವರ ಆರೋಗ್ಯ ವಿಚಾರಿಸಿಕೊಳ್ಳುತ್ತಿದ್ದಾರೆ.
ಉದರ ಸಂಬಂಧಿ ಸಮಸ್ಯೆಗೊಳಗಾಗಿರುವ ರಮೇಶ್ ಕುಮಾರ್ ಚೇತರಿಸಿಕೊಳ್ಳುತ್ತಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ