Webdunia - Bharat's app for daily news and videos

Install App

ಅಂಗಡಿಯಿಂದ ತುಪ್ಪ ತಂದು ತಿನ್ನುವಾಗ ಹುಷಾರ್: 5 ಸ್ಯಾಂಪಲ್ ಗಳಲ್ಲಿ ಅಪಾಯಕಾರಿ ಅಂಶ ಪತ್ತೆ

Krishnaveni K
ಶನಿವಾರ, 26 ಅಕ್ಟೋಬರ್ 2024 (09:49 IST)
ಬೆಂಗಳೂರು: ಆರೋಗ್ಯಕ್ಕೆ ಒಳ್ಳೆಯದು ಎಂದು ಮಾರುಕಟ್ಟೆಯಲ್ಲಿ ಸಿಗುವ ಯಾವುದೋ ತುಪ್ಪ ತಂದು ತಿನ್ನುವ ಮೊದಲು ಹುಷಾರು. ಇದೀಗ ಪರೀಕ್ಷೆಗೊಳಪಡಿಸಲಾದ 5 ತುಪ್ಪದ ಸ್ಯಾಂಪಲ್ ಗಳಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಇತ್ತೀಚೆಗೆ ತಿರುಪತಿಯಲ್ಲಿ ಪ್ರಸಾದ ಲಡ್ಡಿಗೆ ಕಲಬೆರಕೆ ತುಪ್ಪ ಬಳಕೆಯಾದ ಪ್ರಕರಣ ಬೆಳಕಿಗೆ ಬಂದ ಬಳಿಕ ರಾಜ್ಯದಲ್ಲೂ ಆರೋಗ್ಯ ಇಲಾಖೆ ತುಪ್ಪದ ಮಾದರಿಗಳನ್ನು ಪರೀಕ್ಷೆಗೊಳಪಡಿಸಿತ್ತು. ಒಟಟು 230 ಸ್ಯಾಂಪಲ್ ಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ 224 ಸ್ಯಾಂಪಲ್ ಗಳು ಸುರಕ್ಷಿತ ಎಂದು ತಿಳಿದುಬಂದಿದೆ.

ಆದರೆ ಐದು ಸ್ಯಾಂಪಲ್ ಗಳಲ್ಲಿ ಸೇವನೆಗೆ ಯೋಗ್ಯವಲ್ಲ ಅಪಾಯಕಾರಿ ಅಂಶವಿರುವುದು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಇನ್ನೊಂದು ಸ್ಯಾಂಪಲ್ ಅತ್ಯಂತ ಕಳಪೆ ಮಟ್ಟದ್ದು ಎಂದು ಕಂಡುಬಂದಿದೆಯಂತೆ. ಈ ವಿಚಾರವನ್ನು ಅವರು ಮಾಧ್ಯಮಗಳ ಮುಂದೆ ಹಂಚಿಕೊಂಡಿದ್ದಾರೆ.

ಕಲಬೆರಕೆ ಆಹಾರ ಪತ್ತೆಗೆ ಮ್ಯಾಜಿಕ್ ಬಾಕ್ಸ್ ಅಳವಡಿಕೆ ಕಾರ್ಯಕ್ರಮ ಉದ್ಘಾಟನೆ ಸಂದರ್ಭದಲ್ಲಿ ಮಾತನಾಡಿದ ಅವರು ಅಪಾಯಕಾರಿ ತುಪ್ಪದ ಬಗ್ಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಯಾವುದೇ ಹಿಂದೆ-ಮುಂದೆ ಗೊತ್ತಿಲ್ಲದ ತುಪ್ಪ ಮನೆಗೆ ತಂದು ಚಪ್ಪರಿಸಿಕೊಂಡು ತಿನ್ನುವ ಮೊದಲು ಹುಷಾರಾಗಿರುವುದು ಉತ್ತಮ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

ಮುಂದಿನ ಸುದ್ದಿ
Show comments