Publish Date: Sun, 19 Mar 2017 (15:26 IST)
Updated Date: Sun, 19 Mar 2017 (15:28 IST)
ಜಿಲ್ಲೆಯ ಸಕಲೇಶ್ಪುರದ ಬಾಳ್ಳುಪೇಟೆ ಗ್ರಾಮದ ಆಸ್ಪತ್ರೆ ಹದಗೆಟ್ಟಿದೆ ಎನ್ನುವ ಗ್ರಾಮಸ್ಥರ ಮಾತಿಗೆ ಯಾಕೆ ಕಿವಿಗೊಡುವುದಿಲ್ಲ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಖಾಸಗಿ ವಾಹಿನಿಯೊಂದು ನಡೆಸುತ್ತಿರುವ ಹಲೋ ಮಿನಿಸ್ಟರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಆರೋಗ್ಯ ಸಚಿವ ರಮೇಶ್ ಕುಮಾರ್, ಡನತೆಯ ಕರೆಗಳಿಗೆ ಉತ್ತರಿಸುತ್ತಿದ್ದರು.
ಬಾಳ್ಳುಪೇಟೆಯಲ್ಲಿ ಆಸ್ಪತ್ರೆಯಲ್ಲಿ ಸಂಜೆಯಾದರೆ ಆಸ್ಪತ್ರೆಯಲ್ಲಿ ವೈದ್ಯರು ಇರುವುದಿಲ್ಲ. ಆಸ್ಪತ್ರೆ ಅವ್ಯವಸ್ಥೆಯ ತಾಣವಾಗಿದ್ದರೂ ಜಿಲ್ಲಾ ಆರೋಗ್ಯ ಅಧಿಕಾರಿ ಏನು ಮಾಡುತ್ತಿದ್ದಾರೆ. ಕೂಡಲೇ ಅವ್ಯವಸ್ಥೆಯನ್ನು ಸರಿಪಡಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ರಾತ್ರಿ ಹೊತ್ತಿನಲ್ಲಿ ವೈದ್ಯರು ಆಸ್ಪತ್ರೆಯಲ್ಲಿ ಉಪಸ್ಥಿತರಿರುವುದು ಕಡ್ಡಾಯ. ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮಕೈಗೊಳ್ಳಿ ಎಂದು ಜಿಲ್ಲಾ ಆರೋಗ್ಯ ಅಧಿಕಾರಿಗೆ ಸಚಿವ ರಮೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.