Webdunia - Bharat's app for daily news and videos

Install App

ಎಲ್ಲಾ ಪಟಾಕಿ ಮಾಯೆ: ವಾಯು ಮಾಲಿನ್ಯದಿಂದ ಕಣ್ಣುರಿ, ಕೆಮ್ಮು ಗಿಫ್ಟ್

Krishnaveni K
ಶನಿವಾರ, 2 ನವೆಂಬರ್ 2024 (08:50 IST)
ಬೆಂಗಳೂರು: ದೀಪಾವಳಿ ಹಬ್ಬದ ನಿಮಿತ್ತ ಜನ ಎಲ್ಲಾ ಕಡೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದೇನೋ ಸರಿ. ಆದರೆ ಇದರಿಂದಾಗಿ ನಗರದ ವಾಯು ಮಾಲಿನ್ಯ ತೀರಾ ಅಪಾಯಕಾರಿ ಮಟ್ಟಕ್ಕೆ ಕುಸಿದಿದೆ.

ನಿನ್ನೆ ಬಹುತೇಕರು ದೀಪಾವಳಿ ಹಬ್ಬವನ್ನು ಭರ್ಜರಿಯಾಗಿ ಆಚರಿಸಿದ್ದಾರೆ. ಥರ ಥರದ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಆದರೆ ಇದರಿಂದ ವಾಯು ಮಾಲಿನ್ಯ ವಿಪರೀತ ಮಟ್ಟಕ್ಕೆ ಹೋಗಿದೆ. ರಸ್ತೆಯಲ್ಲಿ ಓಡಾಡಲೂ ಆಗದಷ್ಟು ಹೊಗೆಯ ವಾತಾವರಣ. ಮನೆಯ ಬಾಗಿಲು ತೆರೆದಿಟ್ಟರೆ ಮನೆಯೊಳಗೆಲ್ಲಾ ಧೂಮ.

ದೀಪಾವಳಿ ಮೊದಲ ದಿನ ಮಳೆಯಾಗಿದ್ದರಿಂದ ಕೊಂಚ ಮಟ್ಟಿಗೆ ಹೊಗೆ ಕಡಿಮೆಯಾಗಿತ್ತು. ಆದರೆ ನಿನ್ನೆ ಕೊಂಚ ಹೆಚ್ಚೇ ಇತ್ತು ಎನ್ನಬಹುದು. ಇದರಿಂದಾಗಿ ಹಲವರು ಕೆಮ್ಮು, ತಲೆನೋವು, ಅಸ್ತಮಾ, ಕಣ್ಣು ಉರಿಯಂತಹ ಆರೋಗ್ಯ ಸಮಸ್ಯೆಯಿಂದ ಬಳಲುವಂತಾಗಿದೆ.

ಪಟಾಕಿಗಳಲ್ಲಿನ ರಾಸಾಯನಿಕ ವಾತಾವರಣ ಹಾಳು ಮಾಡುವುದಲ್ಲದೆ ಆರೋಗ್ಯವನ್ನೂ ಕೆಡಿಸಿದೆ. ಪ್ರತೀ ವರ್ಷ ಸರ್ಕಾರ ಎಷ್ಟೇ ನಿಬಂಧನೆಗಳನ್ನು ಹಾಕಿದರೂ ಜನನಿಬಿಡ ನಗರ ಪ್ರದೇಶಗಳಾದ ಬೆಂಗಳೂರಿನಂತಹ ಸ್ಥಳಗಳಲ್ಲಿ ಪಟಾಕಿ ಹೊಗೆಯಿಂದ ವಾಯು ಮಾಲಿನ್ಯ ಮತ್ತು ಆರೋಗ್ಯ ಸಮಸ್ಯೆಗಳಾಗುವುದು ತಪ್ಪುವುದಿಲ್ಲ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments