Webdunia - Bharat's app for daily news and videos

Install App

ಆಧುನಿಕ ಜೀವನಶೈಲಿಯಿಂದ ಹೃದಯ ಸಂಬಂಧಿ ಖಾಯಿಲೆ ಹೆಚ್ಚಳ: ಸೌಮ್ಯಾ ರೆಡ್ಡಿ

Webdunia
ಸೋಮವಾರ, 1 ಅಕ್ಟೋಬರ್ 2018 (14:59 IST)
ಆಧುನಿಕ ಜೀವನ ಶೈಲಿಯಿಂದ ಹೃದಯ ಸಂಬಂಧಿ ಹಾಗೂ ಡಯಾಬಿಟಿಸ್ ಖಾಯಿಲೆಗಳು ಹೆಚ್ಚಾಗುತ್ತಿವೆ ಎಂದು ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಹೇಳಿದ್ದಾರೆ.
ನಗರದ ಪ್ರೀಡಂ ಪಾರ್ಕ್ ನಲ್ಲಿ ತಥಾಗತ್ ಹೃದಯ ಆಸ್ಪತ್ರೆ ಆಯೋಜಿಸಿದ್ದ ನನ್ನ ಹೃದಯ ನಿಮ್ಮ ಹೃದಯ ವಾಕಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯುವ ಪೀಳಿಗೆ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ನಾವು ತಿನ್ನುವ ಆಹಾರದಲ್ಲಿಯೂ ಸಾಕಷ್ಟು ವ್ಯತ್ಯಾಸವಾಗಿರುವುದರಿಂದ ಹೃದಯ ಸಂಬಂಧಿ ಖಾಯಿಲೆ ಬರುತ್ತಿದೆ. ಪೌಷ್ಠಿಕ ಹಾಗೂ ಸತ್ವಯುತ ಆಹಾರ ಸೇವನೆಯಿಂದ ರೋಗಗಳನ್ನು ತಡೆಯಬಹುದು.ಈ ನಿಟ್ಟಿನಲ್ಲಿ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಸ್ವಾಗತಾರ್ಹ ಎಂದು ಹೇಳಿದರು.
ಆರೋಗ್ಯ ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಹೃದ್ರೋಗ ಸಮಸ್ಯೆ ಹೆಚ್ಚಾಗುತ್ತಿದೆ. ಜನರು ವ್ಯಾಯಾಮ ಹಾಗೂ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳುವ ಮೂಲಕ ಹೃದಯಾಘಾತ ಆಗುವುದನ್ನು ತಡೆಯಬಹುದು. ರಾಜ್ಯ ಸರ್ಕಾರ ಸಾಂಕ್ರಾಮಿಕವಲ್ಲದ ಹೃದಯ ಸಂಬಂಧಿ ಹಾಗೂ ಡಯಾಬಿಟಿಸ್ ನಂತಹ ರೋಗಗಳ ಪತ್ತೆ ಮಾಡುವ ಕುರಿತು ಬಜೆಟ್ ನಲ್ಲಿ ಯೋಜನೆ ಘೊಷಣೆ ಮಾಡಿದೆ. ಶೀಘ್ರವೇ ಸಂಪುಟದ ಮುಂದೆ ತಂದು ಯೋಜನೆ ಜಾರಿಗೆ ತರಲಾಗುವುದು ಎಂದು ಹೇಳಿದರು.
ತಥಾಗತ್ ಹೃದಯ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ. ಮಹಾಂತೇಶ್ ಚರಂತಿಮಠ್ ಮಾತನಾಡಿ, ಯುವಕರಲ್ಲಿ ಹೃದಯ ಸಬಂಂಧಿ ಖಾಯಿಲೆಗಳು ಹೆಚ್ಚಾಗುತ್ತಿದೆ. ನೂರು ಜನರಲ್ಲಿ ಶೇಕಡಾ ೪೦ ರಷ್ಟು ಜನರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲಯತ್ತಿದ್ದಾರೆ.
 
ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ತಥಾಗತ್ ಸಂಸ್ಥೆವತಿಯಿಂದ  ಪ್ರತಿ ವರ್ಷ ವಾಕಥಾನ್ ಮೂಲಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.
ಇಂದಿನ ವಾಕಥಾನ್ ನಲ್ಲಿ ನಗರದ ಅನೇಕ ಕಾಲೇಜುಗಳಿಂದ ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ ಎಂದು ಹೇಳಿದರು.
 
ವಾಕಥಾನ್ ನಲ್ಲಿ ವಿಧಾನ ಪರಿಷತ್ ಸದಸ್ಯ ಪಿ.ಆರ್. ರಮೇಶ್,  ಡಿಸ್ಟ್ರಿಕ್ ಗೌರ್ನರ್ ೩೧೭ ಇ ಲೈಯನ್ ಎಚ್.ಟಿ. ಸೀತಾರಾಮ್, ಲೈಯನ್ ಚಾಮುಂಡೇಶ್ವರಿ ಪಾಲ್ಗೊಂಡಿದ್ದರು.
 
ನಂತರ ಫ್ರೀಡಂ ಪಾರ್ಕ್ ನಿಂದ ಮಲ್ಲೇಶ್ವರ್ ಮಂತ್ರಿಮಾಲ್ ವರೆಗೂ ವಿದ್ಯಾರ್ಥಿಗಳು ವಾಕಥಾನ್ ನಲ್ಲಿ ಪಾಲ್ಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments