Webdunia - Bharat's app for daily news and videos

Install App

ಹೃದಯಘಾತ ದಿಢೀರ್ ಎಂದು ಬರುವುದಿಲ್ಲ.!

Webdunia
ಬುಧವಾರ, 3 ನವೆಂಬರ್ 2021 (20:18 IST)
ವ್ಯಕ್ತಿಗೆ 12 ಗಂಟೆ ಅಥವಾ 24 ಗಂಟೆ ಮುಂಚಿತವಾಗಿ ಮುನ್ಸೂಚನೆ ಕೊಡುತ್ತೆ. ( Minor Heart Attack ) ಹೃದಯಾಘಾತದ ಲಕ್ಷಣಗಳನ್ನು ನಿರ್ಲಕ್ಷಿಸಬಾರದು. 
ಗ್ಯಾಸ್ಟ್ರಿಕ್‌ನಿಂದ ಎದೆನೋವು ಎಂದು ಭಾವಿಸಿ ಮುಂದೂಡಬಾರದು.
ಎಷ್ಟೋ ಜನಕ್ಕೆ ಇದು ಹೃದಯಾಘಾತದ ಲಕ್ಷಣ,
ಮುನ್ಸೂಚನೆ ಎಂದು ಅರಿವಾಗುವುದಿಲ್ಲ.  ಬೇರೆಯವರಿಗೂ ಮನೆಯವರಿಗೂ  ಹೇಳುವುದಿಲ್ಲ.! 
 
ವಿಪರೀತ ಬೆವರುವುದು,
ಸುಸ್ತಾಗುವುದು,
ಯಾವುದಾದರು ರಟ್ಟೆ ವಿಪರೀತ ನೋಯುವುದು,
ಎದೆ ಕಿವುಚಿದಂತೆ ಆಗುವುದು
* ವಾಮಿಟಿಂಗ್ 
 
ನಿರ್ಲಕ್ಷಿಸಬಾರದು.!
 
ಇಂಥ ಲಕ್ಷಣಗಳು ಹೆಚ್ಚಾಗಿ ನಡಿಗೆ ಮಾಡುವಾಗಲೂ,
ಮೆಟ್ಟಿಲು ಹತ್ತುವಾಗಲೂ ಕಾಣಿಸುತ್ತವೆ, ತಕ್ಷಣ ಆಸ್ಪತ್ರೆಯನ್ನು ಸೇರಬೇಕು.! 
 
ಗೊಲ್ಡನ್ ಹವರ್ 
- ಹೃದಯಾಘಾತವಾದ ಮೊದಲ ಅರ್ಧ ಗಂಟೆಯ ಸಮಯ ವ್ಯರ್ಥ ಮಾಡಬಾರದು.!
 
40 ವರ್ಷದ ನಂತರ ಪ್ರತಿಯೊಬ್ಬರು ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು..!
 
ವಯಸ್ಸಾದವರು, ಈಗಾಗಲೇ ನಿತ್ಯ ಚಿಕಿತ್ಸೆಯಲ್ಲಿ ಇರುವವರು ಹೊರಗೆ ಹೋಗುವಾಗ ಯಾವಾಗಲು ಸಾಕಷ್ಟು ಹಣ, ಜಾರ್ಜ್ ಮಾಡಿದ ಮೊಬೈಲ್(ಯಾವುದಾದರು), 
ಎಟಿಎಂ ಕಾರ್ಡ್, ಐಡಿ ಕಾರ್ಡ್  ಮತ್ತು ನೀರಿನ ಬಾಟಲಿ (200 ಎಂ.ಎಲ್. ಆದರೂ ಪರವಾಗಿಲ್ಲ) 
ಜೊತೆಯಲ್ಲಿ  ತೆಗೆದುಕೊಂಡು ಹೋಗವುದು ಶ್ರೇಯಕರ
 
ಸಾವಿಗೆ ಹೆದರಬಾರದು, ಸಾವು ಹತ್ತಿರ ಸುಳಿಯದಂತೆ ನೋಡಿಕೊಳ್ಳಬೇಕು.!
 
ಯೋಗ ಮಾಡುವುದರಿಂದ, ನಿತ್ಯ ನಡಿಗೆ ಮಾಡುವುದರಿಂದ, ಮಾಂಸಾಹಾರ, ಮೊಟ್ಟೆ ತಿನ್ನದೆ ಶುದ್ಧ ಶಾಖಾಹಾರಿ ಯಾಗಿರುವುದರಿಂದ, ಬೊಜ್ಜು ದಪ್ಪ ಇಲ್ಲದೆ ಇರುವುದರಿಂದ, ತೆಳ್ಳಗೆ ಇರುವುದರಿಂದ, ಚಿಕ್ಕ ವಯಸ್ಸು ಇರುವುದರಿಂದ  ಹೃದಯಾಘಾತ ಆಗುವುದಿಲ್ಲ ಎಂಬುದು ತಪ್ಪು ತಿಳುವಳಿಕೆ. ಅನುವಂಶಿಕ ಕಾರಣಗಳು ಜೊತೆಗೆ ಇತರೆ ಕಾರಣಗಳು ಇರುತ್ತವೆ.!
 
ಪ್ರತಿಯೊಬ್ಬರಿಗೂ ಹೃದಯದಲ್ಲಿ ರಕ್ತದ ಹೆಪ್ಪು(ಕ್ಲಾಟ್) ಸ್ವಲ್ಪವಾದರೂ ಇದ್ದೇ ಇರುತ್ತದೆ, ನಿಧಾನವಾಗಿ ಹೆಚ್ಚಾಗುತ್ತಿರುತ್ತದೆ. ನಡಿಗೆ, ವ್ಯಾಯಾಮ, ಸದಾ ಚಟುವಟಿಕೆ, ಸರಿಯಾದ ಆಹಾರ ಕ್ರಮ, ಸರಳ ಜೀವನ ಇಲ್ಲವಾದಲ್ಲಿ ಬೇಗ ಹೆಪ್ಪುಗಟ್ಟುವುದು (ಕ್ಲಾಟ್) ಹೆಚ್ಚಾಗುತ್ತಿರುತ್ತದೆ, ಆದರೆ  ಮೇಲಿನ ಕಾರ್ಯ ಚಟುವಟಿಕೆಗಳನ್ನು ಪಾಲಿಸಿದರೆ ನಿಯಂತ್ರಣದಲ್ಲಿರುತ್ತದೆ.! 
 
ಈ ಹೃದಯದ ಖಾಯಿಲೆ ಇ.ಸಿ.ಜಿ ಮಾಡಿದಾಗ ಗೊತ್ತಾಗುತ್ತದೆ. 
ಆಶ್ಚರ್ಯವೆಂದರೆ ಎಷ್ಟೋ ಜನಕ್ಕೆ ಇ.ಸಿ.ಜಿ ಮತ್ತು ಎಕೋಗ್ರಾಮ್ ಮಾಡಿದಾಗ ಹೃದಯದ ಖಾಯಿಲೆ ತಿಳಿಯುವುದಿಲ್ಲ. ಆದರೆ ಟಿ.ಎಂ.ಟಿ ಪರೀಕ್ಷೆ ಮಾಡಿದಾಗ ಖಂಡಿತ ಸ್ವಲ್ಲ ಪ್ರಮಾಣವಾದರು ಪತ್ತೆ ಹಚ್ಚುತ್ತಾರೆ, ಆಗ ಅಂಜಿಯೋಗ್ರಾಮ್ ಮಾಡಿಸಬೇಕಾಗುತ್ತದೆ. ಅಂಜಿಯೋಗ್ರಾಮ್ ಪರೀಕ್ಷೆಯಲ್ಲಿ ಅತ್ಯಂತ ನಿಖರವಾಗಿ ಸ್ಪಷ್ಟವಾಗಿ ಕ್ಲಾಟ್ ಪ್ರಮಾಣ ಗೊತ್ತಾಗುತ್ತದೆ. ಕ್ಲಾಟ್‌ಗಳು ಒಂದಕ್ಕಿಂತ ಹೆಚ್ಚು ಕೂಡ  ಮೇಲ್ಪಟ್ಟು ಕೂಡ ಪತ್ತೆಯಾಗಿರುವುದು.  ನಂತರ ಸೂಕ್ತ ಚಿಕೆತ್ಸೆ ಪಡೆದುಕೊಂಡು ಆರಾಮವಾಗಿ ಆರೋಗ್ಯವಾಗಿರಬಹುದು. ಏನು ಹೆದರುವ ಅವಶ್ಯಕತೆ ಇಲ್ಲ. ಸದಾ ಚಟುವಟಿಕೆಯಿಂದ ಇದ್ದರೆ ತಾನು ಹೃದ್ರೋಗಿ ಎಂದು ಅನಿಸುವುದೇ ಇಲ್ಲ, ಎಲ್ಲರಂತೆ ಸುಖ ಜೀವನ ನಡೆಸಬಹುದು.!
 
ಬೇರೆ ಎಲ್ಲ ಖಾಯಿಲೆಗಳಿಗೆ ಚಿಕಿತ್ಸೆ ಹೊಂದಲು ಸಮಯವಿರುತ್ತದೆ.
ಆದರೆ..
ಹೃದಯ  ಖಾಯಿಲೆ ಹಾಗಲ್ಲ, ಕೆಲವೊಮ್ಮೆ ಒಂದು ನಿಮಿಷ ಕೂಡ ಸಮಯವನ್ನೇ ನೀಡುವುದಿಲ್ಲ, ತಕ್ಷಣ ಸಾವಿಗೆ ನೂಕಿ ಬಿಡುತ್ತದೆ. ಬದುಕಲು ಅದೃಷ್ಟ ಬೇಕು
 
ವೈದ್ಯರು ಹೇಳುವುದು ಒಂದೇ...
 
ಉತ್ತಮ ಆಹಾರ ಕ್ರಮ ಅನುಸರಿಸಿ
ಸದಾ ಚಟುವಟಿಕೆಯಿಂದ ಇರಿ
ಸರಳ ಜೀವನ ನಡೆಸಿ
 
ನಿಮ್ಮ ಕುಟುಂಬದ ಹಾಗು ನಿಮ್ಮ ಮಕ್ಕಳ ಭವಿಷ್ಯ ನಿಮ್ಮ ಕೈಯಲ್ಲಿದೆ, 
ಹೆಂಡತಿ ಮಕ್ಕಳನ್ನು, ನಿಮ್ಮ ಕುಟುಂಬವನ್ನು ನಡು ನೀರಿನಲ್ಲಿ ಕೈ ಬಿಡಬೇಡಿ,
ಅವರಿಗಾಗಿ ಬಾಳಿ ಬದುಕಬೇಕು.!

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನಕ್ಕೆ ಪ್ರಧಾನಿ ಮೋದಿ, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಸಂತಾಪ

ಅಕ್ಟೋಬರ್ 1 ರಿಂದ ದೆಹಲಿಯಿಂದ ಮನಿಲಾಗೆ ನೇರ ವಿಮಾನಯಾನ ಆರಂಭ

ಬೆಂಗಳೂರು, ಬೆಳಗಾವಿ ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌, ಪ್ರಹ್ಲಾದ್‌ ಜೋಶಿ ಬೇಡಿಕೆಗೆ ಸ್ಪಂದಿಸಿದ ಕೇಂದ್ರ

ಮುಂದಿನ ಸುದ್ದಿ
Show comments