Select Your Language

Notifications

webdunia
webdunia
webdunia
webdunia

ವರ್ಗಾವಣೆ ದಂಧೆ ಸರಕಾರಕ್ಕೆ ಹಾಲು ನೀಡುವ ಕಾಮಧೇನು: ಪ್ರಹ್ಲಾದ್ ಜೋಶಿ

ವರ್ಗಾವಣೆ ದಂಧೆ
ಹುಬ್ಬಳ್ಳಿ , ಶನಿವಾರ, 23 ಜುಲೈ 2016 (16:46 IST)
ಪೊಲೀಸ್ ವರ್ಗಾವಣೆಯಲ್ಲಿ ಬಾರಿ ಪ್ರಮಾಣದ ಅಕ್ರಮ ನಡೆಯುತ್ತಿದೆ. ಅಕ್ರಮ ವರ್ಗಾವಣೆ ದಂಧೆ ರಾಜ್ಯ ಸರಕಾರಕ್ಕೆ ಹಾಲು ನೀಡುವ ಕಾಮಧೇನು ಆಗಿದೆ ಎಂದು ಸಂಸದ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.
 
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸುತ್ತ ಕ್ರಿಮಿನಲ್‌ಗಳು ಸುತ್ತಾಡುತ್ತಾರೆ. ಅವರು ಕ್ರಿಮಿನಲ್‌ಗಳಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
 
ಶೀಘ್ರದಲ್ಲಿಯೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗುತ್ತೇವೆ. ರಾಜ್ಯದಲ್ಲಿರುವ ಕಾನೂನು ಸುವ್ಯವಸ್ಥೆ ಕುರಿತು ವರಿದಿ ಕೇಳುವಂತೆ ಮನವಿ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.
 
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಆಪ್ತ ಮರಿಗೌಡನನ್ನು ಇನ್ನೂ ಬಂಧಿಸಿಲ್ಲ. ಮುಖ್ಯಮಂತ್ರಿ ಅವರು ಕ್ರಿಮಿನಲ್‌ಗಳ ರಕ್ಷಣೆಗೆ ನಿಂತಿದ್ದಾರೆ ಎಂದು ರಾಜ್ಯ ಸರಕಾರದ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಾರಿಗೆ ನೌಕರರ ವಿರುದ್ಧ ಎಸ್ಮಾ ಹೇರಲು ಸರಕಾರ ನಿರ್ಧಾರ: ರಾಮಲಿಂಗಾರೆಡ್ಡಿ