Webdunia - Bharat's app for daily news and videos

Install App

ಅಮಲೇರಿಸಿಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

Webdunia
ಭಾನುವಾರ, 27 ಜುಲೈ 2014 (17:18 IST)
ಮದ್ಯದ ಅಮಲು ಹೆಚ್ಚಿಸಿಕೊಳ್ಳಲು  ಸರಾಯಿಯಲ್ಲಿ ಶುಂಠಿ,ಹೊಗೆಸೊಪ್ಪು, ಮೆಣಸು ಮತ್ತು ಇತರ ಕೆಲವು ವಸ್ತುಗಳನ್ನು ಬೆರೆಸಿ ಕುಡಿದ ಪರಿಣಾಮ ಓರ್ವ ಯುವಕ ಮೃತಪಟ್ಟು, ಉಳಿದವರಿಬ್ಬರು ಗಂಭೀರವಾಗಿ ಅಸ್ವಸ್ಥರಾದ ಘಟನೆ  ಮೈಸೂರಿನ ಹಳೇಕೇರಿಹಾಡಿಯಲ್ಲಿ ನಡೆದಿದೆ.

ಮೃತನನ್ನು 18 ವರ್ಷದ ಕುಮಾರ್ ಎಂದು ಗುರುತಿಸಲಾಗಿದ್ದು, ಒಬ್ಬ ಮಹಿಳೆ ಸೇರಿದಂತೆ ಮೂವರು  ಜಾಸ್ತಿ ಅಮಲೇರಿಸಿಕೊಳ್ಳುವ ಉದ್ದೇಶದಿಂದ ಶುಂಠಿ ಮತ್ತು ಮತ್ತಿತರ ವಸ್ತುಗಳನ್ನು ಬೆರೆಸಿ ಮೀತಿ ಮೀರಿ ಮದ್ಯ ಕುಡಿದಿದ್ದರು ಎಂದು ತಿಳಿದು ಬಂದಿದೆ. 
 
ಕುಡಿದ ಸ್ವಲ್ಪ ಹೊತ್ತಿನಲ್ಲಿಯೇ ಅವರ ಬಾಯಿಯಿಂದ ಮತ್ತು ಮೂಗಿನಿಂದ ರಕ್ತ ಬರಲು ಪ್ರಾರಂಭವಾಯಿತು.  ಅಸ್ವಸ್ಥರಾದ ಅವರನ್ನು  ಕೆಆರ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಕುಮಾರ್ ಮಾರ್ಗ ಮಧ್ಯದಲ್ಲಿಯೇ ಮೃತ ಪಟ್ಟಿದ್ದಾನೆ. ಉಳಿದವರಿಬ್ಬರಿಗೆ ಸಕಾಲಕ್ಕೆ ಚಿಕಿತ್ಸೆ ನೀಡಲಾಗಿದ್ದು, ಅವರಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. 
 
ಸ್ಥಳಕ್ಕೆ ಭೇಟಿ ನೀಡಿರುವ ಪಿರಿಯಾಪಟ್ಟಣ ಠಾಣಾ ಪೋಲಿಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments