Webdunia - Bharat's app for daily news and videos

Install App

ಭಾರೀ ಪ್ರವಾಹ : 10ನೇ ತರಗತಿ ಕೆಓಎಸ್ ಪರೀಕ್ಷೆ ಮುಂದೂಡಲು ಮನವಿ

Webdunia
ಭಾನುವಾರ, 25 ಜುಲೈ 2021 (17:05 IST)
ಬೆಂಗಳೂರು (ಜು.25):  ರಾಜ್ಯದ ಹಲವು ಕಡೆ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆ 10 ನೇ ತರಗತಿ ಕೆಓಎಸ್ ಪರೀಕ್ಷೆ ಮುಂದೂಡುವಂತೆ ಮನವಿ ಮಾಡಲಾಗಿದೆ.

•ರಾಜ್ಯದ ಹಲವು ಕಡೆ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆ
•10 ನೇ ತರಗತಿ ಕೆಓಎಸ್ ಪರೀಕ್ಷೆ ಮುಂದೂಡುವಂತೆ ಮನವಿ
ಕರ್ನಾಟಕ ಓಪನ್ ಸ್ಕೂಲ್, ಭಾರತಿ ಇನ್ಸ್ಟಿಟ್ಯೂಟ್ ಆಫ್ ಸ್ಕೂಲಿಂಗ್ ನಿಂದ ಶಿಕ್ಷಣ ಸಚಿವರಿಗೆ ಪರೀಕ್ಷೆ ಮುಂದೂಡಲು ಮನವಿ ಮಾಡಲಾಗಿದೆ. ನಾಳೆಯಿಂದ ರಾಜ್ಯಾದ್ಯಂತ  ಖಾಸಗಿ ವಿದ್ಯಾರ್ಥಿಗಳ ಕೆಒಎಸ್ 10 ನೇ ತರಗತಿ ಪರೀಕ್ಷೆ ಆರಂಭವಾಗುತ್ತಿದೆ. 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿದೆ.
ಆದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಗೆ ಹಾಜರಾಗಲು ತೊಂದರೆಯಾಗಿದೆ. ಮಳೆ ಹೆಚ್ಚಾಗಿರುವ  ಉತ್ತರ ಕರ್ನಾಟಕ ಭಾಗದಲ್ಲೇ 4 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ.
ನಾಳೆ ಪರೀಕ್ಷೆಗೆ ಇನ್ನೂ ಯಾರು ಸಹ ಹಾಲ್ ಟಿಕೆಟ್ ಪಡೆದಿಲ್ಲ.ಪ್ರವಾಹ ಹಿನ್ನಲೆ ರಸ್ತೆ ಸಂಪರ್ಕ ಕಡಿತಗೊಂಡಿದೆ, ಬಸ್ ಸಂಚಾರವಿಲ್ಲ ಹಾಗಾಗಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಆರಂಭವಾಗುವ ಪರೀಕ್ಷೆಗೆ ಹಾಜರಾಗುವುದು ಕಷ್ಟವಾಗಿದೆ. ಶಿಕ್ಷಣ ಸಚಿವರು ತಕ್ಷಣ ಈ ಬಗ್ಗೆ ಗಮನ ಹರಿಸಿ ಪರೀಕ್ಷೆ ಮುಂದೂಡಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮವಹಿಸುವಂತೆ ಮನವಿ ಮಾಡಲಾಗಿದೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments