ಭಾರೀ ಪ್ರವಾಹ : 10ನೇ ತರಗತಿ ಕೆಓಎಸ್ ಪರೀಕ್ಷೆ ಮುಂದೂಡಲು ಮನವಿ

Webdunia
ಭಾನುವಾರ, 25 ಜುಲೈ 2021 (17:05 IST)
ಬೆಂಗಳೂರು (ಜು.25):  ರಾಜ್ಯದ ಹಲವು ಕಡೆ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆ 10 ನೇ ತರಗತಿ ಕೆಓಎಸ್ ಪರೀಕ್ಷೆ ಮುಂದೂಡುವಂತೆ ಮನವಿ ಮಾಡಲಾಗಿದೆ.

•ರಾಜ್ಯದ ಹಲವು ಕಡೆ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆ
•10 ನೇ ತರಗತಿ ಕೆಓಎಸ್ ಪರೀಕ್ಷೆ ಮುಂದೂಡುವಂತೆ ಮನವಿ
ಕರ್ನಾಟಕ ಓಪನ್ ಸ್ಕೂಲ್, ಭಾರತಿ ಇನ್ಸ್ಟಿಟ್ಯೂಟ್ ಆಫ್ ಸ್ಕೂಲಿಂಗ್ ನಿಂದ ಶಿಕ್ಷಣ ಸಚಿವರಿಗೆ ಪರೀಕ್ಷೆ ಮುಂದೂಡಲು ಮನವಿ ಮಾಡಲಾಗಿದೆ. ನಾಳೆಯಿಂದ ರಾಜ್ಯಾದ್ಯಂತ  ಖಾಸಗಿ ವಿದ್ಯಾರ್ಥಿಗಳ ಕೆಒಎಸ್ 10 ನೇ ತರಗತಿ ಪರೀಕ್ಷೆ ಆರಂಭವಾಗುತ್ತಿದೆ. 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿದೆ.
ಆದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಗೆ ಹಾಜರಾಗಲು ತೊಂದರೆಯಾಗಿದೆ. ಮಳೆ ಹೆಚ್ಚಾಗಿರುವ  ಉತ್ತರ ಕರ್ನಾಟಕ ಭಾಗದಲ್ಲೇ 4 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ.
ನಾಳೆ ಪರೀಕ್ಷೆಗೆ ಇನ್ನೂ ಯಾರು ಸಹ ಹಾಲ್ ಟಿಕೆಟ್ ಪಡೆದಿಲ್ಲ.ಪ್ರವಾಹ ಹಿನ್ನಲೆ ರಸ್ತೆ ಸಂಪರ್ಕ ಕಡಿತಗೊಂಡಿದೆ, ಬಸ್ ಸಂಚಾರವಿಲ್ಲ ಹಾಗಾಗಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಆರಂಭವಾಗುವ ಪರೀಕ್ಷೆಗೆ ಹಾಜರಾಗುವುದು ಕಷ್ಟವಾಗಿದೆ. ಶಿಕ್ಷಣ ಸಚಿವರು ತಕ್ಷಣ ಈ ಬಗ್ಗೆ ಗಮನ ಹರಿಸಿ ಪರೀಕ್ಷೆ ಮುಂದೂಡಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮವಹಿಸುವಂತೆ ಮನವಿ ಮಾಡಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments