Select Your Language

Notifications

webdunia
webdunia
webdunia
webdunia

ಹುಬ್ಬಳಿಯಲ್ಲಿ ದಟ್ಟ ಮಂಜು : ಕೊನೆಗೂ ಲ್ಯಾಂಡ್ ಆದ ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನ

ಹುಬ್ಬಳಿಯಲ್ಲಿ ದಟ್ಟ ಮಂಜು : ಕೊನೆಗೂ ಲ್ಯಾಂಡ್ ಆದ ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನ
hubali , ಶುಕ್ರವಾರ, 10 ಡಿಸೆಂಬರ್ 2021 (15:30 IST)
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ದಟ್ಟು ಮಂಜು ಆವರಿಸಿದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಇರುವ ವಿಮಾನದ ಲ್ಯಾಂಡಿಂಗ್ ಗೆ ಸಮಸ್ಯೆಯಾಗಿತ್ತು. ಇದೀಗ ಸಿಎಂ ಬೊಮ್ಮಾಯಿ ಇದ್ದ ವಿಮಾನ ಲ್ಯಾಂಡ್ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಬೆಂಗಳೂರಿನಿಂದ ಹುಬ್ಬಳಿಗೆ ತೆರಳಿದ್ದು, ಹುಬ್ಬಳ್ಳಿಯಲ್ಲಿ ದಟ್ಟ ಮಂಜು ಆವರಿಸುವ ಹಿನ್ನೆಲೆಯಲ್ಲಿ ವಿಮಾನ ಲ್ಯಾಂಡಿಂಗ್ ಗೆ ಸಮಸ್ಯೆಯಾಗಿತ್ತು. 7.30 ಕ್ಕೆ ಲ್ಯಾಂಡಿಂಗ್ ಆಗಬೇಕಿದ್ದ ಸಿಎಂ ಬೊಮ್ಮಾಯಿ ಇದ್ದ ಇಂಡಿಗೋ ವಿಮಾನ ಮಂಜು ಆವರಿಸಿರುವ ಹಿನ್ನೆಲೆಯಲ್ಲಿ ಅರ್ಧಗಂಟೆ ತಡವಾಗಿ ವಿಮಾನ ಲ್ಯಾಂಡ್ ಆಗಿದೆ. ಅರ್ಧ ಗಂಟೆ ಬಳಿಕ ಲ್ಯಾಂಡಿಂಗ್ ಗೆ ಕ್ಲಿಯರೆನ್ಸ್ ಸಿಕ್ಕ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಇದ್ದ ವಿಮಾನ ಲ್ಯಾಂಡಿಂಗ್ ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಂಡ-ಹೆಂಡತಿ ಜಗಳಕ್ಕೆ ಮಗು ತುತ್ತಾಯ್ತು!