ಬೆಂಗಳೂರಿನಲ್ಲಿ ವರುಣನ ಆರ್ಭಟ..!

Webdunia
ಮಂಗಳವಾರ, 2 ಆಗಸ್ಟ್ 2022 (17:38 IST)
ಬೆಂಗಳೂರಿನಲ್ಲಿ ಹಲವೆಡೆ ನಿನ್ನೆ ರಾತ್ರಿ ಭಾರೀ ಮಳೆಯಾದ ಪರಿಣಾಮ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಈ ಪೈಕಿ ಎರಡು ತಿಂಗಳ ಹಿಂದೆಯಷ್ಟೆ ಸಂಪೂರ್ಣ ಜಲಾವೃತವಾಗಿದ್ದ ಸಾಯಿ ಲೇಔಟ್ ಕೂಡ ಒಂದು. ಇಲ್ಲಿನ ಜನರ ಬೇಸರದ ಸಂಗತಿ ಏನೆಂದರೆ, ಈ ಪ್ರದೇಶಕ್ಕೆ ಅಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ಕೊಟ್ಟು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಆದರೆ ಸಮಸ್ಯೆಯನ್ನು ನಿರ್ಲಕ್ಷಿಸಿ, ನೀಡಿದ ಭರವಸೆಯನ್ನು ಭರವಸೆಯಾಗಿಯೇ ಉಳಿಸಿದ ಪರಿಣಾಮ ನಿನ್ನೆ ಮತ್ತೆ ಸಾಯಿ ಲೇಔಟ್ ಜಲಾವೃತಗೊಂಡಿದೆ. ಅಲ್ಲದೆ ನಿರಂತರ ಮಳೆಯಾಗುತ್ತಿರುವುದರಿಂದ ಮನೆಯೊಳಗೆ ಪದೇಪದೇ ನೀರು ನುಗ್ಗುತ್ತಿದೆ. ಸಾಯಿ ಲೇಔಟ್​ ಮತ್ತೆ ಜಲಾವೃತಗೊಂಡ ಹಿನ್ನೆಲೆ ಸಮಸ್ಯೆ ಬಗೆಹರಿಸುವಲ್ಲಿ ನಿರ್ಲಕ್ಷ್ಯ ತೋರಿದ ಸರ್ಕಾರ ಮತ್ತು ಬಿಬಿಎಂಪಿ ವಿರುದ್ಧ ನಿವಾಸಿಗಳು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ನಗರದಲ್ಲಿ ಸುರಿದ ಭಾರೀ ಮಳೆಯಿಂದ ಮರದ ರೆಂಬೆ ಮುರಿದುಬಿದ್ದ ಘಟನೆ ಮೇಖ್ರಿ ಸರ್ಕಲ್​ನ ಸ್ಕೈವಾಕ್​ ಬಳಿ ನಡೆದಿದೆ. ಬುಡ ಸಮೇತ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಕೆಲ ಕಾಲ ವಾಹನ ಸಂಚಾರಕ್ಕೆ ಅಡಚಣೆಯಾಯ್ತು..ಏರ್ ಪೋರ್ಟ್ ಕಡೆ ಹೋಗ್ತಿದ್ದ ಜನರಿಗೆ ಟ್ರಾಫಿಕ್ ಜಾಮ್​ನಿಂದ ಕಿರಿಕಿರಿ ಉಂಟಾಯ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಂಚ ಸ್ವೀಕರ: ರೆಡ್‌ಹ್ಯಾಂಡ್‌ ಆಗಿ ಲಾಕ್ ಆದ ಮೀನುಗಾರಿಕೆ ಇಲಾಖೆಯ ಸೂಪರ್‌ವೈಸರ್‌

ಹಾವೇರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ತುಂಡಾಗಿ ಬಿದ್ದ ವಿದ್ಯುತ್ ತಂತಿ, 900ಕ್ಕೂ ಅಧಿಕ ಅಡಕೆ ಸಸಿಗಳು ನಾಶ

2025ರಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಅಂಗಾಂಗ ದಾನ, ರಾಷ್ಟ್ರ ಮಟ್ಟದಲ್ಲಿ ಮೂರನೇ ಸ್ಥಾನ

ಸಿಎಂ ಕುರ್ಚಿ ಗುದ್ದಾಟದ ನಡುವೆ ಜನರ ಆಶೀರ್ವಾದವಿರಬೇಕೆಂದ ಸಿದ್ದರಾಮಯ್ಯ, ಭಾರೀ ಕುತೂಹಲ

ಮುಂದಿನ ಸುದ್ದಿ
Show comments