Webdunia - Bharat's app for daily news and videos

Install App

ರಾಜಧಾನಿ ಬೆಂಗಳೂರಿನಲ್ಲಿ ಮಳೆ ಅಬ್ಬರ

Webdunia
ಶುಕ್ರವಾರ, 19 ನವೆಂಬರ್ 2021 (20:52 IST)
ಬೆಂಗಳೂರಿನಲ್ಲಿ ಕಳೆದ 10 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.ನಗರದಲ್ಲಿ ಮೆಜಸ್ಟಿಕ್, ಶಾಂತಿನಗರ, ನಾಗರಬಾವಿ, ಮಾನ್ಯತಾ ಟೆಕ್ ಪಾರ್ಜ್, ಜಯನಗರ ಬಡಾವಣೆ, ಬನಶಂಕರಿ ಸೇರಿದಂತೆ ಬಹುತೇಕ ಪ್ರದೇಶಗಳಲ್ಲಿ ರಾತ್ರಿ ಇಡೀ ಮಳೆ ಸುರಿದಿದೆ.
 
ಹೈರಾಣಾದ ವಾಹನ ಸವಾರರು:
 
ಬೆಂಗಳೂರಿನಲ್ಲಿ  ಸುರಿದ ಭಾರೀ ಮಳೆಗೆ ಎಂಜಿ ರಸ್ತೆ, ಕೆ.ಜಿ.ರಸ್ತೆ, ಸಿಟಿ‌ ಮಾರ್ಕೇಟ್, ಕಾರ್ಪೋರೇಷನ್, ಕೆ.ಆರ್ ಸರ್ಕಲ್, ಚಾಲುಕ್ಯ ಸರ್ಕಲ್, ವಿಂಡ್ಸರ್ ಮ್ಯಾನರ್, ಮಲ್ಲೇಶ್ವರ, ಯಶವಂತಪುರ, ಹೆಬ್ಬಾಳ, ಪೀಣ್ಯ ಸೇರಿದಂತೆ ಹಲವೆಡೆ ಪ್ರಮುಖ ರಸ್ತೆಗಳು ಟ್ರಾಫಿಕ್ ಜಾಮ್ ಉಂಟಾಗಿತ್ತು.
ಕೆಲವು ಪ್ರದೇಶಗಳಲ್ಲಿ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆಯ ಮೇಲೆ 3 ಅಡಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಗಿತ್ತು.
 
ಸಿಎಂ ಸಭೆ:
 
ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಿನ್ನೆಲೆ ಇಂದು ಮಧ್ಯಾಹ್ನ ಸಿಎಂ ಬಸವರಾಜ್ ಬೊಮ್ಮಾಯಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ಮಳೆ ಹಾನಿ, ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ.
 
ಭಾರೀ ಮಳೆಗೆ ಕುಸಿದ ಮನೆ:
 
ಭಾರೀ ಮಳೆ ಹಿನ್ನೆಲೆ ಬೆಂಗಳೂರಿನ ಲಿಡೋ ಮಾಲ್ ಬಳಿ ಮನೆ ಕುಸಿದಿದ್ದು, ಮನೆಯಲ್ಲಿ ಯಾರು ಇಲ್ಲದ ಪರಿಣಾಮ ಭಾರಿ ಅಪಾಯ ತಪ್ಪಿದಂತಾಗಿದೆ.
 
ಶಾಲೆಗಳಿಗೆ ರಜೆ:
 
ಕಳೆದ ಹಲವು ದಿನಗಳಿಂದ ಬೆಂಗಳೂರು ನಗರದಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
 
ಎಲ್ಲೆಲ್ಲಿ ಮಳೆ..?
 
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮೆಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments