Publish Date: Sat, 08 Jul 2023 (15:51 IST)
Updated Date: Sat, 08 Jul 2023 (15:53 IST)
ರಾಜಧಾನಿ ಬೆಂಗಳೂರಿನಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಇದ್ದು,ಮಳೆಯಿಂದ ರಾಜಧಾನಿಯಲ್ಲಿ ಕೂಲ್..ಕೂಲ್ ವೆದರ್ ಇದೆ.ಮಲ್ಲೇಶ್ವರಂ, ಶಿವಾನಂದ ಸರ್ಕಲ್, ಮೆಜೆಸ್ಟಿಕ್, ಕೆ.ಆರ್ ಸರ್ಕಲ್, ರಾಜಾಜಿ ನಗರ ಸೇರಿದಂತೆ ಹಲವೆಡೆ ಮಳೆಯಾಗಿದೆ.ಇನ್ನು ಸಂಪರ್ಕ ರಸ್ತೆಯಲ್ಲಿ ಕೆಲ ಕಾಲ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಯಿತು.ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ.ಬೆಂಗಳೂರಲ್ಲಿ ಇನ್ನು ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ.