Webdunia - Bharat's app for daily news and videos

Install App

ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ

Webdunia
ಗುರುವಾರ, 18 ನವೆಂಬರ್ 2021 (21:07 IST)
ಬೆಂಗಳೂರು: -ರಾಜ್ಯದಲ್ಲಿ ಮುಂದಿನ ನಾಲ್ಕು ದಿನದವರೆಗೂ ಭಾರೀ ಮಳೆಯಾಗಲಿದೆ. ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಗ್ರಾಮಾಂತರ ಸೇರಿದಂತೆ ಹಲವೆಡೆ ಭಾರೀ ಮಳೆ ಸಾಧ್ಯತೆ ಇದೆ. ಇನ್ನೆರಡು ದಿನ ಮೋಡ ಕವಿದ ವಾತಾವರಣ ಮುಂದುವರಲಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು, ಪಶ್ಚಿಮ ಘಟ್ಟ, ಕರಾವಳಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರದಲ್ಲೂ ಮುಂದಿನ ಮೂರು ದಿನ ಮಳೆಯಾಗಲಿದ್ದು, ಬೆಂಗಳೂರು ನಗರದಲ್ಲಿ ಯಲ್ಲೋ ಅಲರ್ಟ್ ನೀಡಲಾಗಿದೆ ಎಂದು ಪಬ್ಲಿಕ್ ಟಿವಿಗೆ ಹವಾಮಾನ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ.
ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅತಿ ಹೆಚ್ಚು ಮಳೆ ಮುನ್ಸೂಚನೆ ಇದೆ. ಮಲೆನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಬದಲಾಗಬಹುದು. ಬಂಗಾಳಕೊಲ್ಲಿಯಿಂದ ಕರಾವಳಿ ಕಡೆ ಸಾಗುತ್ತಿರುವ ವಾಯುಭಾರ ಕುಸಿತವಾಗಿದೆ. ಬೆಂಗಳೂರು ನಗರ, ಕೋಲಾರ, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ ಕೊಡಗು ಜಿಲ್ಲೆಯಲ್ಲಿ ಹೆಚ್ಚು ಮಳೆ ಮುನ್ಸೂಚನೆ ಇದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments