Publish Date: Sun, 20 Sep 2020 (11:30 IST)
Updated Date: Sun, 20 Sep 2020 (11:31 IST)
ಉಡುಪಿ : ಉಡುಪಿ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಉಡುಪಿ ನಗರದ ಪ್ರಮುಖ ರಸ್ತೆಗಳು ಜಲಾವೃತಗೊಂಡಿದೆ.
ಉಡುಪಿ-ಮಣಿಪಾಲ ರಸ್ತೆ ಸಂಪರ್ಕ ಕಡಿತವಾಗಿದೆ. ಮಲ್ಪೆ-ಮೊಳಕಾಲ್ಮೂರು ಸಂಚಾರ ವ್ಯತ್ಯಯವಾಗಿದೆ. ಸ್ವರ್ಣ ನದಿ ನೀರು ತುಂಬಿ ಹರಿಯುತ್ತಿರುವ ಹಿನ್ನಲೆಯಲ್ಲಿ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ.
ಉಡುಪಿ ಆಗುಂಬೆ ಸಂಚಾರವೂ ಬಂದ್ ಆಗಿದೆ. ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ದ.ಕನ್ನಡ, ವಿಜಯಪುರ, ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.