Webdunia - Bharat's app for daily news and videos

Install App

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ

Webdunia
ಮಂಗಳವಾರ, 3 ಜುಲೈ 2018 (16:31 IST)
ದಕ್ಷಿಣ ಕನ್ನಡ ಜಿಲ್ಲೆ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದೆ .ಈಗಾಗಲೇ  ಭಾರತೀಯ ಹವಾಮಾನ ಇಲಾಖೆ  ರಾಜ್ಯದ ಕರಾವಳಿ ಯಲ್ಲಿ ನಾಳೆಯಿಂದ 4 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ. 
 
ದಕ್ಷಿಣ ಕನ್ನಡ ಉಡುಪಿ ಉತ್ತರ ಕನ್ನಡ ಜಿಲ್ಲೆ ಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ .ಉತ್ತರ ಹಾಗೂ ದಕ್ಷಿಣ ಒಳ ನಾಡಿ ನಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹೇಳಿದೆ .
 
ಭಾರಿ ಮಳೆ ಆಗುವ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಢಳಿತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಎಲ್ಲಾ ತಾಲೂಕಿನ ಅಧಿಕಾರಿಗಳಿಗೆ ತಿಳಿಸಿದೆ .ಕಡಲ ಹಾಗೂ ನದಿ ತೀರದ ಜನರಿಗೆ ಎಚ್ಚರಿಕೆ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ. ಅಲ್ಲದೆ ಮೀನುಗಾರರಿಗೆ ಮೀನುಗಾರಿಕೆಗೆ ತೆರಳದಂತೆ ಸೂಚಿಸಲಾಗಿದೆ. ಕೇರಳ ಹಾಗು ಲಕ್ಷದ್ವೀಪ ದಲ್ಲೂ ಭಾರಿ ಮಳೆ ಆಗುವ ಮುನ್ಸೂಚನೆ ಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ .

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ 1630 ಮಿಲಿ ಮೀಟರ್ ಮಳೆಯಾಗಿದ್ದು ಇದು ಕಳೆದ ಕೆಲವು ವರ್ಷಗಳ ಬಳಿಕ ಸುರಿದ ಗರಿಷ್ಠ ಮಳೆಯಾಗಿದೆ.
ಬೆಳ್ತಂಗಡಿ ತಾಲೂಕ್ ನಲ್ಲಿ ಗರಿಷ್ಠ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಗುರುವಾಯನ ಕೆರೆ ಧರ್ಮಸ್ಥಳ ಉಜಿರೆ ಮುಂತಾದ ಕಡೆ ಉತ್ತಮ ಮಳೆಯಾಗುತ್ತಿದೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments