ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮೂರು ದಿನ ಭಾರಿ ಮಳೆ

Webdunia
ಶನಿವಾರ, 6 ನವೆಂಬರ್ 2021 (20:30 IST)
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
 
ಕಳೆದ ಮೂರು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು ನಗರದಲ್ಲಿ ಶುಕ್ರವಾರ ರಾತ್ರಿ ಸುರಿದ ಮಳೆಯಿಂದಾಗಿ ಜನ ಜೀವನ ಅಸ್ತ ವ್ಯಸ್ಥ ಗೊಂಡಿತು. ನಗರದ ಬಹುತೇಕ ಭಾಗಗಳಲ್ಲಿ ಮಳೆರಾಯ ಅಬ್ಬರಿಸಿದ್ದಾನೆ ಎಂದಿದೆ.
 
ಉತ್ತರ ಕರ್ನಾಟಕ ಭಾಗದಲ್ಲಿ ಒಣ ಹವೆ ಮುಂದುವರಿಯಲ್ಲಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಗಳು ಸಹ ಇದೆ ಎಂದು ಹೇಳಿದೆ 
 
ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ವಾಯುಭಾರ ಕುಸಿತ:
 
ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳಯುಂಟಾಗುತ್ತಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನವೆಂಬರ್ 6ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸಿದೆ.
 
ಮೀನುಗಾರರಿಗೆ ಎಚ್ಚರಿಕೆ:
 
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದ್ದು ಮೀನುಗಾರರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
 
ಶೀತಗಾಳಿಯ ಅನುಭವ:
 
ರಾಜ್ಯದಲ್ಲಿ ಚಳಿಗಾಲ ಆರಂಭವಾಗುತ್ತಿದ್ದು, ಬೆಳಗಿನ ಜಾವ ಮತ್ತು ಸಂಜೆ ಶೀತಗಾಳಿಯ ಅನುಭವವಾಗುತ್ತಿದೆ ಎಂದು ಮಾಹಿತಿ ನೀಡಿದೆ.
 
ಬೆಂಗಳೂರಿನಲ್ಲಿ ವರುಣನ ರುದ್ರಾನರ್ತನ:
 
ರಾತ್ರಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ಹಬ್ಬದ ಸಂಭ್ರಮದಲ್ಲಿ ಹೊರಗೆ ಬಂದಿದ್ದ ಜನ ಮಳೆಯಲ್ಲಿ ಸಿಲುಕಿದರು. ಒಂದು ಗಂಟೆಗೂ ಅಧಿಕ ಕಾಲ ಸುರಿದ ಮಳೆಗೆ ವಾಹನ ಸವಾರರು ಫೈಓವರ್ ಕೆಳಗೆ ಆಶ್ರಯ ಪಡೆದಿದ್ದರು. 
 
ಗುರುವಾರ ರಾತ್ರಿ ಒಂದು ಗಂಟೆಗೂ ಅಧಿಕ ಕಾಲ ಸುರಿದ ಮಳೆಗೆ ರಸ್ತೆಗಳ ಮೇಲೆ ನೀರು ಹೊಳೆಯಂತೆ ಹರಿದು ಬರುವ ದೃಶ್ಯ ಕಂಡು ಬಂದಿತ್ತು. ಇದೇ ಪರಿಸ್ಥಿತಿ ಶುಕ್ರವಾರವೂ ಮುಂದುವರಿದಿತ್ತು. ಮೆಜೆಸ್ಟಿಕ್, ಶಾಂತಿನಗರ, ವಿಧಾನಸೌಧ, ರಾಜಾಜಿ ನಗರ, ಮತ್ತಿಕೆರೆ, ಯಶವಂತಪುರ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments