Webdunia - Bharat's app for daily news and videos

Install App

ಕಲಬುರಗಿಯಲ್ಲಿ ಜೋರಾದ ವರುಣನ ಅರ್ಭಟ: ಮೂವರ ಬಲಿ

Webdunia
ಶುಕ್ರವಾರ, 16 ಸೆಪ್ಟಂಬರ್ 2016 (19:23 IST)
ಜಿಲ್ಲೆಯಾದ್ಯಂತ ಮೂರು ದಿನಗಳಿಂದ ವರುಣನ ಅಬ್ಬರ ಹೆಚ್ಚಾಗಿದ್ದು, ಸೇತುವೆಗಳ ಮೇಲೆ ನೀರು ಹರಿಯುತ್ತಿದ್ದುದಲ್ಲದೇ ಮನೆಗಳು ಕುಸಿದ ಮೂವರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಮಳೆಯ ಆಗಮನ ಒಂದೆಡೆ ರೈತರಿಗೆ ಖುಷಿಯನ್ನು ತಂದಿದ್ದರೆ, ಮತ್ತೊಂದೆಡೆ ಅವಾಂತರಗಳು ಸೃಷ್ಟಿಯಾಗಿವೆ. ಹಲವೆಡೆ ಮನೆಗಳು ಕುಸಿದುಬಿದ್ದಿದ್ದರೆ, ಮತ್ತೊಂದೆಡೆ ಸೇತುವೆಗಳ ಮೇಲೆ ನೀರು ತುಂಬಿ ಸಂಚಾರ ವ್ಯವಸ್ಥೆಗಳಿಗೆ ತೊಂದರೆಗಳು ಉಂಟಾಗಿದ್ದವು.
 
ಜಿಲ್ಲೆಯಾದ್ಯಂತ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದ್ದು, ರಸ್ತೆಗಳ ಮೇಲೆ ನೀರು ಹರಿದು ವಾಹನ ಸಂಚಾರಕ್ಕೆ ಭಾರಿ ಅಡ್ಡಿಯಾಗಿದೆ.  
 
ರಾಜ್ಯದ ಹಲವೆಡೆ ನಿನ್ನೆ ಮಧ್ಯಮ ಮಟ್ಟದಲ್ಲಿ ಮಳೆಯಾಗಿದ್ದು, ಮಲೆನಾಡು ಹಾಗೂ ಕರಾವಳಿ ತೀರ ಪ್ರದೇಶದಲ್ಲಿ ಕಡಿಮೆ ಮಟ್ಟದಲ್ಲಿ ಮಳೆಯಾಗಿದೆ. ಬಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿ 43 ಮಿ.ಮೀ ಮತ್ತು ಬೀದರ್ ನ ಬಸವಕಲ್ಯಾಣದಲ್ಲಿ 20 ಮಿ.ಮೀ ನಷ್ಟು ಮಳೆಯಾಗಿದೆ. ಇನ್ನು ನಗರದಲ್ಲೂ ಹಲವೆಡೆ ವರುಣನ ಆರ್ಭಟ ಜೋರಾಗಿಯೇ ಇತ್ತು.
 
ಬೀದರ್ ಜಿಲ್ಲೆಯಲ್ಲೂ ವರುಣನ ಅರ್ಭಟ ಜೋರಾಗಿದ್ದು, ಹಲವಾರು ಸೇತುಗಳು ಮುಳುಗಡೆಯಾಗಿವೆ. ರೈತರ ಹೊಲಗಳಿಗೆ ನೀರು ನುಗ್ಗಿದ್ದರಿಂದ ರೈತರಿಗೆ ಮಳೆ ಬಂದ ಸಂತೋಷ ಒಂದು ಕಡೆಯಾದರೆ ಮತ್ತೊಂದೆಡೆ ಕಷ್ಟವನ್ನು ಎದುರಿಸಬೇಕಾಗಿ ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ಭೂಕುಸಿತವಾಗಿದ್ದ ವಯನಾಡಿನಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ

ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದ ಮಗ: ಮನನೊಂದು ದಂಪತಿ ಆತ್ಮಹತ್ಯೆ

ಕೆಆರ್‌ಎಸ್‌ ಉದ್ಯಾನವನದಲ್ಲಿ ಕಾವೇರಿ ಆರತಿಗೆ ರಾಜ್ಯ ಸರ್ಕಾರ ಚಿಂತನೆ

CBSE ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೊಸ ಪದ್ಧತಿ: ಮುಂದಿನ ವರ್ಷದಿಂದಲೇ ಜಾರಿಗೆ

ಸಂವಿಧಾನಕ್ಕೆ ಏನಾದ್ರೂ ಅಪಾಯವಿದ್ರೆ ಅದು ನಿಮ್ಮಿಂದಲೇ ಮಿಸ್ಟರ್ ಮೋದಿ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments