Webdunia - Bharat's app for daily news and videos

Install App

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಭಾರಿ ಮಳೆ: ಹೈ ಅಲರ್ಟ್ ಘೋಷಣೆ

Webdunia
ಸೋಮವಾರ, 6 ಸೆಪ್ಟಂಬರ್ 2021 (20:29 IST)
ಬೆಂಗಳೂರು: ದಕ್ಷಿಣ ಒಡಿಶಾ ಮತ್ತು ಉತ್ತರ ಆಂದ್ರಪ್ರದೇಶದ ವಾಯುವ್ಯ ಭಾಗದಲ್ಲಿನ  ಪಶ್ಚಿಮ ಬಂಗಾಲ ಕೊಲ್ಲಿಯಲ್ಲಿ   ವಾಯುಭಾರ ಕುಸಿತವಾಗಿದೆ. 7.6  ಕಿ. ಮೀ ಎತ್ತರದಲ್ಲಿ ಸುಳಿಗಾಳಿ ಇದ್ದು,  ಎರಡು ಮೂರು ದಿನಗಳಲ್ಲಿ ಪಶ್ಚಿಮ ಹಾಗು ವಾಯುವ್ಯ  ದಿಕ್ಕಿಗೆ ಚಲಿಸುವುದನ್ನು ನಿರೀಕ್ಷಿಸಲಾಗಿದೆ. ಈ ಹಿನ್ನಲೆಯಲ್ಲಿ  ಕರ್ನಾಟಕದಲ್ಲಿ ಸೋಮವಾರವೂ ಸಹ ಭಾರಿ ಅಥವಾ  ಅತಿ ಭಾರಿ ಮಳೆಯ ಮುನ್ಸೂಚನೆ ಇದೆ ಎಂದು ಹಲವಮನ ಇಲಾಖೆ ತಿಳಿಸಿದೆ. 
 
ಕರಾವಳಿಯಲ್ಲಿ ಸೆಪ್ಟೆಂಬರ್ 6  ಮತ್ತು 7 ರಂದು ಅತಿ ಭಾರಿ ಮಳೆ ಬೀಳುವ ನಿರೀಕ್ಷೆಯಿಂದ ಅರೇಂಜ್ ಅಲರ್ಟ್ ನೀಡಲಾಗಿದೆ. 8  ಮತ್ತು 9 ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಕಲ್ಬುರ್ಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ  ಇಂದು ಮತ್ತು ನಾಳೆ  ಕೆಲವು ಕಡೆ ಅತಿ ಭಾರಿ ಮಳೆಯಾಗಲಿದ್ದು,  ಅರೇಂಜ್ ಅಲರ್ಟ್ ನೀಡಲಾಗಿದೆ ಎಂದು ಹೇಳಿದೆ 
 
ಬೆಳಗಾವಿ, ಬೀದರ್, ಹಾವೇರಿ, ಗದಗ್, ಹಾವೇರಿ ಬೀದರ್, ರಾಯಚೂರು ಜಿಲ್ಲೆಗಳಲ್ಲಿ 6  ಮತ್ತು 7 ರಂದು  ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ  ಇಂದು ಭಾರಿ ಅಲೆಯಾಗುವ ಸೂಚನೆ ಇರುವುದರಿಂದ ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. 
 
ಸೋಮವಾರದ  ಪ್ರಮುಖಾಂಶ::  
ಮುಂಗಾರು ರಾಜ್ಯದೆಲ್ಲೆಡೆ ಚುರುಕಾಗಿದ್ದು, ಕರಾವಳಿ ಹಾಗು ಉತ್ತರ ಒಳನಾಡಿನ ಬಹುತೇಕ ಎಲ್ಲಾ ಕಡೆ ಮಳೆಯಾಗಿದೆ, ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಿದೆ ಮುಖ್ಯವಾಗಿ ಕಂಪ್ಲಿಯಲ್ಲಿ  9 ಸೆ.ಮೀ , ಮುಲ್ಕಿ 8 ಸೆ.ಮೀ, ಕದ್ರಾ, ಕುಕನೂರು, ಸಂತೆಹಳ್ಳಿಯಲ್ಲಿ ತಲಾ 7 ಸೆ.ಮೀ ಮಳೆಯಾಗಿದೆ ಎಂದು ಇಲಾಖೆ ತಿಳಿಸಿದೆ.  
 
ಮುಂದಿನ ದಿನಗಳಲ್ಲಿ ಮಳೆ: 
ರಾಜ್ಯದ ಮುಂದಿನ 24 ಗಂಟೆಯಲ್ಲಿ ಬಹುತೇಕ ಕಡೆ ಮಳೆ ನೀರಿಕ್ಷಿಸಲಾಗಿದೆ.  ಮುಂದಿನ 48 ಗಂಟೆಗಳಲ್ಲಿ ಕರಾವಳಿ,  ಉತ್ತರ ಒಳನಾಡಿನಲ್ಲಿ, ದಕ್ಷಿಣ ಒಳನಾಡಿನಲ್ಲಿ  ಗುಡುಗು ಸಹಿತ ಮಳೆಯಾಗುವ ಹೆಚ್ಚಿನ ನಿರೀಕ್ಷೆ  ಇದೆ ಎಂದಿದೆ.
 
ಮೀನುಗಾರರಿಗೆ ಮುನ್ನೆಚ್ಚರಿಕೆ:
ಕರಾವಳಿಯುದ್ದಕ್ಕೂ ಮತ್ತು  ಕರಾವಳಿಯನ್ನು  ಭೇದಿಸಿ ಗಾಳಿ 40  ರಿಂದ 50 ಕಿ.ಮೀ  ಪಾರ್ಟಿ ಗಂಟೆಗೆ ಬೀಸುವ ನಿರೀಕ್ಷೆ ಇದೆ, ಹಾಗಾಗಿ ಈ ಪ್ರದೇಶಗಲ್ಲಿ ಸಮುದ್ರಕ್ಕೆ ಇಳಿಯಬಾರದು ಎಂದು ಎನ್ನುವ ಮುನ್ಸೂಚನೆಯನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದೆ.
 
ರಾಜಧಾನಿಯಲ್ಲಿ ಮಳೆ: 
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ  ಇದೆ, ಗರಿಷ್ಟ 28  ಡಿಗ್ರಿ ಕನಿಷ್ಠ 20 ಡಿಗ್ರಿ ಉಷ್ಣಾಂಶ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments