Webdunia - Bharat's app for daily news and videos

Install App

ಜಲಾವೃತವಾಗಿದ್ದ ಮನೆಯಿಂದ ಬಾಣಂತಿ, ಮಗುವನ್ನ ರಕ್ಷಿಸಿದ ಸ್ಥಳೀಯರು..!

Webdunia
ಮಂಗಳವಾರ, 15 ಆಗಸ್ಟ್ 2017 (12:55 IST)
ಮಹಾನಗರಿ ಬೆಂಗಳೂರು ಒಂದೇ ಒಂದು ಮಳೆಗೆ ತೋಯ್ದು ತೊಪ್ಪೆಯಾಗಿದೆ. ಕೋರಮಂಗಲ, ಮಡಿವಾಳ, ಈಜೀಪುರ, ವಿಲ್ಸನ್ ಗಾರ್ಡನ್, ಬೊಮ್ಮನಹಳ್ಳಿ, ಎಲೆಕ್ಟ್ರಾನಿಕ್ ಸಿಟಿ, ಶಾಂತಿನಗರ, ಸಿಲ್ಕ ಬೋರ್ಡ್ ಸೇರಿದಂತೆ ನಗರದ ಹಲವೆಡೆ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ತಗ್ಗು ಪ್ರದೇಶದ ಮನೆಗಳು, ಕ್ವಾಟ್ರಸ್`ಗಳಿಗೆ ನೀರು ನುಗ್ಗಿ ಜನ ಪರದಾಡುವಂತಾಗಿದೆ.

ಹಲವೆಡೆ ರಸ್ತೆಗಳು ಜಲಾವೃತವಾಗಿದ್ದು, ಜನರು ಪರದಾಡುತ್ತಿದ್ದಾರೆ. ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ರಾತ್ರಿ ಇಡೀ
ಜನ ನಿದ್ದೆ ಮಾಡದೇ ಕಳೆದಿದ್ದಾರೆ. ಕೆಳಮಹಡಿ ಜಲಾವೃತವಾಗಿದ್ದರಿಂದ ಮೊದಲ ಮಹಡಿಗೆ ಬಂದು ವಾಸ್ತವ್ಯ ಹೂಡಿದ ಬಗ್ಗೆಯೂ ವರದಿಯಾಗಿದೆ. ಶಾಂತಿನಗರ ಬಸ್ ನಿಲ್ದಾಣದಲ್ಲಿ ನೀರು ತುಂಬಿದ್ದರಿಂದ ಬಸ್`ಗಳನ್ನ ಹೊರತೆಗೆಯಲಾಗದೇ ಚಾಲಕರ ಕೆಲ ಕಾಲ ಪರಿತಪಿಸಿದ್ದುಂಟು. ಮಳೆ ನೀರಿನ ಜೊತೆ ಹಾವುಗಳು ಸಹ ಮನೆಗೆ ನುಗ್ಗಿದ್ದ ಬಗ್ಗೆ ವರದಿಯಾಗಿದೆ.  ಸಿಲ್ಕ್ ಬೋರ್ಡ್ ಜಂಕ್ಷನ್`ನಲ್ಲಿ ಹೊಳೆಯಂತೆ ನೀರು ತುಂಬಿದೆ. ಮಳೆಯ ಆರ್ಭಟಕ್ಕೆ ಸಿಲ್ಕ್ ಬೊರ್ಡ್ ಹೆಡ್ ಆಫೀಸ್ ಗ್ರಿಲ್ ಕೊಚ್ಚಿಹೋಗಿದೆ. ಕ್ವಾಟ್ರಸ್ ಮತ್ತು ಪಾರ್ಕಿಂಗ್ ಜಲ಻ವೃತವಾಗಿದ್ದು, ನಿವಾಸಿಗಳು ಹೊರಗೆ ತೆರಳಲಾರದೇ ಮನೆಯಲ್ಲೇ ಉಳಿದಿದ್ದಾರೆ.

ಇತ್ತ, ಕೋರಮಂಗಲದ ಮನೆಯೊಂದು ಜಲಾವೃತಗೊಂಡಿದ್ದು, ಮನೆಯಲ್ಲಿದ್ದ ಬಾಣಂತಿ ಮತ್ತು 1 ತಿಂಗಳ ಮಗುವನ್ನ ಸಾರ್ವಜನಿಕರು ರಕ್ಷಿಸಿದ್ದಾರೆ. ನೀರಿನ ಪ್ರಮಾಣದ ಪಡಿಮೆಯಾದ ಹಿನ್ನೆಲೆಯಲ್ಲಿ ಸಂಬಂಧಿಕರ ಮನೆಗೆ ಅವರನ್ನ ಕಳುಹಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments