ಬೆಂಗಳೂರಲ್ಲಿ ಭಾರಿ ಮಳೆ: ಹಲವೆಡೆ ಮರಗಳು ಧರಾಶಾಹಿ, ಸಂಚಾರ ಅಸ್ತವ್ಯಸ್ತ

Webdunia
ಸೋಮವಾರ, 20 ಸೆಪ್ಟಂಬರ್ 2021 (20:18 IST)
ಬೆಂಗಳೂರು: ನಗರದ ಹಲವು ಭಾಗಗಳಲ್ಲಿ ಸೋಮವಾರ ಮಧ್ಯಾಹ್ನ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಕೆಲವೆಡೆ ಮರಗಳು ನೆಲಕ್ಕುರುಳಿವೆ. ನಗರದ ಹಲವೆಡೆ ನೀರು ನುಗ್ಗಿದ್ದು, ವಾಹನ ಸವಾರರು ಪರದಾಡುವಂತಾಯಿತು.ಮಧ್ಯಾಹ್ನ 1.30ರ ಬಳಿಕ ಭಾರಿ ಮಳೆ ಪ್ರಾರಂಭವಾಗಿ ಸಂಜೆಯವರೆಗೆ ಸುರಿಯುವ ಸಾಧ್ಯತೆ ಇದೆ. 
 
ಹಲವೆಡೆ ಮಳೆ:
 
ನಗರದ ಆರ್.ಆರ್. ನಗರ, ಅಂಜನಪುರ, ಬೇಗೂರು, ಯಲಹಂಕ, ವಿದ್ಯಾರಣ್ಯಪುರ, ಮಹದೇವಪುರ, ಹೊರಮಾವು, ಪ್ಯಾಲೆಸ್​ ಗುಟ್ಟಹಳ್ಳಿ, ಮಲ್ಲೇಶ್ವರ, ವಿಧಾನಸೌಧ, ಪುಲಕೇಶಿನಗರ, ನಾಗರಬಾವಿ, ಕೋರಮಂಗಲ, ನಾಯಂಡಹಳ್ಳಿ, ಲಕ್ಕಸಂದ್ರ, ವಿದ್ಯಾಪೀಠ, ಕೆಂಗೇರಿ ಸೇರಿದಂತೆ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಸದಾಶಿವನಗರ, ಯಶವಂತಪುರ, ಹೂಡಿ, ವಿಶ್ವನಾಥನಾಗೇನಹಳ್ಳಿ, ರಾಮಮೂರ್ತಿನಗರ, ಕಾಡುಗೋಡಿ ಸೇರಿದಂತೆ ಬಹುತೇಕ ಕಡೆ ಸಾಧಾರಣ ಮಳೆಯಾಗಿರುವ ವರದಿಯಾಗಿದೆ.
 
ಪ್ರಮುಖ ರಸ್ತೆಗಳಲ್ಲಿ ನೀರು: 
 
ಭಾರಿ ಮಳೆಗೆ ಮಲ್ಲೇಶ್ವರ, ಮೈಸೂರು ರಸ್ತೆ, ರಾಜಭವನ ರಸ್ತೆ, ಶಿವಾಜಿನಗರ, ರಾಜಾಜಿನಗರ, ಪ್ಯಾಲೇಸ್​ ಗುಟ್ಟಹಳ್ಳಿ, ಹಲಸೂರು, ಶಿವಾನಂದ ವೃತ್ತ, ಕೆ.ಆರ್.ಪುರ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಅರ್ಧ ಅಡಿಯಷ್ಟು ನೀರು ನಿಂತಿದೆ. ಸ್ಮಾರ್ಟ್ ಸಿಟಿ ಯೋಜನೆಯಿಂದ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿ ಸ್ಥಳಗಳಲ್ಲಿ ನೀರು ನಿಂತಿದ್ದ ದೃಶ್ಯ ಕಂಡು ಬಂದಿದೆ
tree

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ಡಿಚ್ಚಿ.. ಚೈನ್ ಕಳ್ಳನಿಗೆ ಪಾಠ ಕಲಿಸಿದ ಅಟೋ ಡ್ರೈವರ್ ಸಾಹಸ ಹೇಗಿತ್ತು ನೋಡಿ Video

ಪ್ರವಾಹದಲ್ಲಿ ತೇಲಿಬಂತು ಎಲ್ ಪಿಜಿ ಸಿಲಿಂಡರ್: ಸಿಕ್ಕಿದ್ದೇ ಲಾಭ ಎಂದು ಹೊತ್ತೊಯ್ದ ಜನ Video

ಸ್ಮೋಕಿಂಗ್ ಮಾಡಲು ನನ್ನ ಪರ್ಮಿಷನ್ ತಗೊಂಡ್ರಾ: ಕ್ಯಾಬ್ ಚಾಲಕನ ಧೈರ್ಯಕ್ಕೆ ನೆಟ್ಟಿಗರ ಸಲಾಂ Video

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗಾಳಿ ಸಹಿತ ಭಾರೀ ಮಳೆ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಮುಂದಿನ ಸುದ್ದಿ
Show comments