Webdunia - Bharat's app for daily news and videos

Install App

ಬೆಂಗಳೂರಲ್ಲಿ ಭಾರಿ ಮಳೆ: ಹಲವೆಡೆ ಮರಗಳು ಧರಾಶಾಹಿ, ಸಂಚಾರ ಅಸ್ತವ್ಯಸ್ತ

Webdunia
ಸೋಮವಾರ, 20 ಸೆಪ್ಟಂಬರ್ 2021 (20:18 IST)
ಬೆಂಗಳೂರು: ನಗರದ ಹಲವು ಭಾಗಗಳಲ್ಲಿ ಸೋಮವಾರ ಮಧ್ಯಾಹ್ನ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಕೆಲವೆಡೆ ಮರಗಳು ನೆಲಕ್ಕುರುಳಿವೆ. ನಗರದ ಹಲವೆಡೆ ನೀರು ನುಗ್ಗಿದ್ದು, ವಾಹನ ಸವಾರರು ಪರದಾಡುವಂತಾಯಿತು.ಮಧ್ಯಾಹ್ನ 1.30ರ ಬಳಿಕ ಭಾರಿ ಮಳೆ ಪ್ರಾರಂಭವಾಗಿ ಸಂಜೆಯವರೆಗೆ ಸುರಿಯುವ ಸಾಧ್ಯತೆ ಇದೆ. 
 
ಹಲವೆಡೆ ಮಳೆ:
 
ನಗರದ ಆರ್.ಆರ್. ನಗರ, ಅಂಜನಪುರ, ಬೇಗೂರು, ಯಲಹಂಕ, ವಿದ್ಯಾರಣ್ಯಪುರ, ಮಹದೇವಪುರ, ಹೊರಮಾವು, ಪ್ಯಾಲೆಸ್​ ಗುಟ್ಟಹಳ್ಳಿ, ಮಲ್ಲೇಶ್ವರ, ವಿಧಾನಸೌಧ, ಪುಲಕೇಶಿನಗರ, ನಾಗರಬಾವಿ, ಕೋರಮಂಗಲ, ನಾಯಂಡಹಳ್ಳಿ, ಲಕ್ಕಸಂದ್ರ, ವಿದ್ಯಾಪೀಠ, ಕೆಂಗೇರಿ ಸೇರಿದಂತೆ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಸದಾಶಿವನಗರ, ಯಶವಂತಪುರ, ಹೂಡಿ, ವಿಶ್ವನಾಥನಾಗೇನಹಳ್ಳಿ, ರಾಮಮೂರ್ತಿನಗರ, ಕಾಡುಗೋಡಿ ಸೇರಿದಂತೆ ಬಹುತೇಕ ಕಡೆ ಸಾಧಾರಣ ಮಳೆಯಾಗಿರುವ ವರದಿಯಾಗಿದೆ.
 
ಪ್ರಮುಖ ರಸ್ತೆಗಳಲ್ಲಿ ನೀರು: 
 
ಭಾರಿ ಮಳೆಗೆ ಮಲ್ಲೇಶ್ವರ, ಮೈಸೂರು ರಸ್ತೆ, ರಾಜಭವನ ರಸ್ತೆ, ಶಿವಾಜಿನಗರ, ರಾಜಾಜಿನಗರ, ಪ್ಯಾಲೇಸ್​ ಗುಟ್ಟಹಳ್ಳಿ, ಹಲಸೂರು, ಶಿವಾನಂದ ವೃತ್ತ, ಕೆ.ಆರ್.ಪುರ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಅರ್ಧ ಅಡಿಯಷ್ಟು ನೀರು ನಿಂತಿದೆ. ಸ್ಮಾರ್ಟ್ ಸಿಟಿ ಯೋಜನೆಯಿಂದ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿ ಸ್ಥಳಗಳಲ್ಲಿ ನೀರು ನಿಂತಿದ್ದ ದೃಶ್ಯ ಕಂಡು ಬಂದಿದೆ
tree

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments