Webdunia - Bharat's app for daily news and videos

Install App

ಕೇರಳದಲ್ಲಿ ಭಾರೀ ಮಳೆ

Webdunia
ಬುಧವಾರ, 17 ನವೆಂಬರ್ 2021 (20:25 IST)
ಕೇರಳದಲ್ಲಿ ಮಳೆ ಮುಂದುವರಿದಿದೆ. ತಿರುವನಂತಪುರ, ಕೊಲ್ಲಂ ಹಾಗೂ ಕೊಟ್ಟಾಯಂ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದು, ಮಳೆಯ ಸಂಭವದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಹಲವೆಡೆ ಸೊತ್ತುಗಳಿಗೆ ಹಾನಿ ಉಂಟಾಗಿದೆ.
ಭಾರತ ಹವಾಮಾನ ಇಲಾಖೆ ಕೇರಳದ ಎರ್ನಾಕುಳಂ, ಇಡುಕ್ಕಿ, ತ್ರಿಶೂರು, ಕೋಝಿಕ್ಕೋಡ್, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಸೋಮವಾರ ಆರೆಂಜ್ ಅಲರ್ಟ್ ಘೋಷಿಸಿತ್ತು. ಕೊಲ್ಲಂ, ಕೊಟ್ಟಾಯಂ, ತಿರುವನಂತಪುರ, ಇಡುಕ್ಕಿ ಹಾಗೂ ತ್ರಿಶೂರು ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ ಮಳೆಯಿಂದ ತೀವ್ರ ಹಾನಿ ಉಂಟಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ ನೀಡಿದೆ. ರಾಜ್ಯಾದ್ಯಂತ ಮಳೆ ಸಂಬಂಧಿಸಿದ ಹಲವು ದುರಂತಗಳು ಸಂಭವಿಸಿವೆ. ಒಂದು ಮನೆ ಸಂಪೂರ್ಣವಾಗಿ ನಾಶವಾಗಿದೆ.
28 ಮನೆಗಳಿಗೆ ಭಾಗಶಃ ಹಾನಿ ಉಂಟಾಗಿದೆ. ಕಳೆದ 24 ಗಂಟೆಗಳಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹೇಳಿದೆ. ಕಣ್ಣೂರು ಹಾಗೂ ತ್ರಿಶೂರು ಜಿಲ್ಲೆಗಳಲ್ಲಿ ರವಿವಾರ ಸಂಭವಿಸಿದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಎರ್ನಾಕುಳಂ ಜಿಲ್ಲೆಯಲ್ಲಿ ಗುಡ್ಡೆ ಕುಸಿತ ಸಂಭವಿಸಿ ಓರ್ವ ಚಾಲಕ ಮೃತಪಟ್ಟಿದ್ದಾರೆ.
ಕೇರಳದಲ್ಲಿ ಅಕ್ಟೋಬರ್ 1 ರಿಂದ 15 ರ ಅವಧಿಯಲ್ಲಿ 833.8 ಎಂಎಂ ಮಳೆ ಸುರಿದಿದೆ. ಭಾರೀ ಮಳೆಯಿಂದ ಹಲವು ವಿಶ್ವವಿದ್ಯಾನಿಲಯಗಳು ಸೋಮವಾರ ಹಾಗೂ ಮಂಗಳವಾರ ನಡೆಯಲಿರುವ ಪರೀಕ್ಷೆಯನ್ನು ಮುಂದೂಡಲಾಗಿದೆ. 7 ದಕ್ಷಿಣ ಜಿಲ್ಲೆಗಳ ಜಿಲ್ಲಾಧಿಕಾರಿಗಳ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments