ಕೇರಳದಲ್ಲಿ ಭಾರೀ ಮಳೆ

Webdunia
ಬುಧವಾರ, 17 ನವೆಂಬರ್ 2021 (20:25 IST)
ಕೇರಳದಲ್ಲಿ ಮಳೆ ಮುಂದುವರಿದಿದೆ. ತಿರುವನಂತಪುರ, ಕೊಲ್ಲಂ ಹಾಗೂ ಕೊಟ್ಟಾಯಂ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದು, ಮಳೆಯ ಸಂಭವದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಹಲವೆಡೆ ಸೊತ್ತುಗಳಿಗೆ ಹಾನಿ ಉಂಟಾಗಿದೆ.
ಭಾರತ ಹವಾಮಾನ ಇಲಾಖೆ ಕೇರಳದ ಎರ್ನಾಕುಳಂ, ಇಡುಕ್ಕಿ, ತ್ರಿಶೂರು, ಕೋಝಿಕ್ಕೋಡ್, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಸೋಮವಾರ ಆರೆಂಜ್ ಅಲರ್ಟ್ ಘೋಷಿಸಿತ್ತು. ಕೊಲ್ಲಂ, ಕೊಟ್ಟಾಯಂ, ತಿರುವನಂತಪುರ, ಇಡುಕ್ಕಿ ಹಾಗೂ ತ್ರಿಶೂರು ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ ಮಳೆಯಿಂದ ತೀವ್ರ ಹಾನಿ ಉಂಟಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ ನೀಡಿದೆ. ರಾಜ್ಯಾದ್ಯಂತ ಮಳೆ ಸಂಬಂಧಿಸಿದ ಹಲವು ದುರಂತಗಳು ಸಂಭವಿಸಿವೆ. ಒಂದು ಮನೆ ಸಂಪೂರ್ಣವಾಗಿ ನಾಶವಾಗಿದೆ.
28 ಮನೆಗಳಿಗೆ ಭಾಗಶಃ ಹಾನಿ ಉಂಟಾಗಿದೆ. ಕಳೆದ 24 ಗಂಟೆಗಳಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹೇಳಿದೆ. ಕಣ್ಣೂರು ಹಾಗೂ ತ್ರಿಶೂರು ಜಿಲ್ಲೆಗಳಲ್ಲಿ ರವಿವಾರ ಸಂಭವಿಸಿದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಎರ್ನಾಕುಳಂ ಜಿಲ್ಲೆಯಲ್ಲಿ ಗುಡ್ಡೆ ಕುಸಿತ ಸಂಭವಿಸಿ ಓರ್ವ ಚಾಲಕ ಮೃತಪಟ್ಟಿದ್ದಾರೆ.
ಕೇರಳದಲ್ಲಿ ಅಕ್ಟೋಬರ್ 1 ರಿಂದ 15 ರ ಅವಧಿಯಲ್ಲಿ 833.8 ಎಂಎಂ ಮಳೆ ಸುರಿದಿದೆ. ಭಾರೀ ಮಳೆಯಿಂದ ಹಲವು ವಿಶ್ವವಿದ್ಯಾನಿಲಯಗಳು ಸೋಮವಾರ ಹಾಗೂ ಮಂಗಳವಾರ ನಡೆಯಲಿರುವ ಪರೀಕ್ಷೆಯನ್ನು ಮುಂದೂಡಲಾಗಿದೆ. 7 ದಕ್ಷಿಣ ಜಿಲ್ಲೆಗಳ ಜಿಲ್ಲಾಧಿಕಾರಿಗಳ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments