Select Your Language

Notifications

webdunia
webdunia
webdunia
webdunia

ರಾಜ್ಯದ ಹಲವೆಡೆ ಭಾರೀ ಮಳೆ; ಜನಜೀವನ ಅಸ್ತವ್ಯಸ್ತ

ರಾಜ್ಯದ ಹಲವೆಡೆ ಭಾರೀ ಮಳೆ; ಜನಜೀವನ ಅಸ್ತವ್ಯಸ್ತ
ಬೆಂಗಳೂರು , ಗುರುವಾರ, 15 ಅಕ್ಟೋಬರ್ 2020 (11:02 IST)
ಬೆಂಗಳೂರು : ರಾಜ್ಯದಲ್ಲಿ ಹಲವೆಡೆ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ, ಅಪಾರ ಆಸ್ತಿಪಾಸ್ತಿ ಹಾನಿ, ಪ್ರಾಣ ಹಾನಿ ಸಂಭವಿಸಿದೆ.

ಕಲಬುರಗಿಯಲ್ಲಿ ಬೋರಿ ಹಳ್ಳ ಉಕ್ಕಿ ಹರಿಯುತ್ತಿದ್ದು, ಇದರಿಂದ ಬಂಕಲಗಾ ಗ್ರಾಮ ಜಲಾವೃತವಾಗಿದೆ. ರಾಯಚೂರು  ತಾಲೂಕಿನ ಚಂದ್ರಬಂಡ ಹೋಬಳಿಯಲ್ಲಿ ರಾತ್ರಿಯಿಡಿ ಸುರಿದ ಭಾರೀ ಮಳೆಗೆ ಭತ್ತ, ಹತ್ತಿ ಬೆಳೆ ನೀರುಪಾಲಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ಡೋಣಿ ನದಿಯ ಅಬ್ಬರ ಜೋರಾಗಿದ್ದು, ನೂರಾರು ಎಕರೆ ಜಮೀನಿಗೆ ನೀರು ನುಗ್ಗಿ ಮೆಕ್ಕೆಜೋಳ, ಹತ್ತಿ, ತೊಗರಿ , ಕಬ್ಬು ಸೇರಿದಂತೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಬಾಗಲಕೋಟೆಯಲ್ಲಿ ಮಹಾಮಳೆಯಿಂದ 1500ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಲ್ಕು ವರ್ಷದ ಬಾಲಕನ ಹೂತು ಹಾಕಿದ ಯವತಿ