Webdunia - Bharat's app for daily news and videos

Install App

ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ

Webdunia
ಭಾನುವಾರ, 10 ಅಕ್ಟೋಬರ್ 2021 (21:54 IST)
ಬೆಂಗಳೂರು: ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಿದ್ದು, ಕೆಲವೆಡೆ ಕೆರೆಗಳು ಭರ್ತಿಯಾಗಿವೆ.
ದಾವಣಗೆರೆ ತಾಲೂಕಿನ ಆನಗೋಡು ಗ್ರಾಮದ ಕೆರೆಯಲ್ಲಿ ಕಳೆದ ಐವತ್ತು ವರ್ಷಗಳಿಂದ ಹನಿ ನೀರಿರಲಿಲ್ಲ. ಕಳೆದ ಐದಾರು ದಿನಗಳಿಂದ ಮಳೆಯಾಗುತ್ತಿದ್ದು, ಕೆರೆ ಭರ್ತಿಯಾಗಿದೆ. ಕೊಪ್ಪಳ ದಲ್ಲಿ ಸಜ್ಜೆ ಬೆಳೆಯು ಮಳೆ -  ಗಾಳಿಯಿಂದ ನೆಲಕ್ಕೆ ಉರುಳಿದೆ.
ಯಾದಗಿರಿಯ ಮೋಟ್ನಳ್ಳಿ ಗ್ರಾಮದಲ್ಲಿ ಮಳೆಗೆ ನಾಲ್ಕೈದು ಮನೆಗಳು ಕುಸಿದಿವೆ. ಕೆಲ ಮನೆಗಳು ಭಾಗಶಃ ಹಾನಿಯಾಗಿವೆ. ಹೊಲಗಳಿಗೆ ಮಳೆ ನೀರು ನುಗ್ಗಿ ಭತ್ತ, ಹತ್ತಿ, ಶೇಂಗಾ ಬೆಳೆಗಳು ನಾಶವಾಗಿವೆ.
 
ಭಾನುವಾರ ಕಲಬುರಗಿ ಮಹಾನಗರ ಸೇರಿದಂತೆ ತಾಲೂಕಿನ ವಿವಿಧೆಡೆ ವರುಣ ಆರ್ಭರ್ ಮುಂದುವರಿದಿದೆ. ನಗರದ ಬ್ರಹ್ಮಪುರ, ಲಾಳಗೇರಿ ಕ್ರಾಸ್, ಸೋನಿಯಾ ಗಾಂಧಿ ಕಾಲೊನಿ, ಶಾಂತಿನಗರ, ಪ್ರಶಾಂತ ನಗರ, ವೆಂಕಟೇಶ್ವರ ನಗರ, ಎಸ್.ಬಿ. ಟೆಂಪಲ್, ಗುಲಾಬವಾಡಿ, ಎಪಿಎಂಸಿ ಪ್ರದೇಶ ಸೇರಿದಂತೆ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದೆ.  ಚರಂಡಿಗಳು ತುಂಬಿಕೊಂಡು ಕೊಚ್ಚೆ ಸಮೇತ ಮಳೆ ನೀರು ರಸ್ತೆಗಳ ಮೇಲೆ ಹೊಳೆಯಂತೆ ಹರಿಯಿತು.
ಉಕ್ಕೇರಿದ ಮುಲ್ಲಾಮಾರಿ ನದಿ:
ಚಿಂಚೋಳಿ ತಾಲೂಕಿನಲ್ಲಿ ನಾಲ್ಕೈದು ದಿನಗಳಿಂದ  ನಿರಂತರವಾಗಿ ಮಳೆ ಸುರಿದಿದೆ. ಇದರಿಂದ ಜಲಾಶಯಗಳಿಗೆ ಒಳ ಹರಿವು ಹೆಚ್ಚಾಗಿದೆ. ನೀರಿನ ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ನಾಗರಾಳ ಜಲಾಶಯದಿಂದ ನದಿಗೆ ನೀರು ಬಿಡಲಾಗಿದೆ. ಇದರಿಂದ ಮುಲ್ಲಾಮಾರಿ ನದಿಯಲ್ಲಿ ಪ್ರವಾಹ ಭೀತಿ ಉಂಟಾಗಿದೆ. 
ಎರಡು ದಿನ ಭಾರೀ ಮಳೆ:
ಸೋಮವಾರ ಮತ್ತು ಮಂಗಳವಾರ ಉತ್ತರ ಕನ್ನಡ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಮೈಸೂರು, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ ದಾವಣಗೆರೆ ಜಿಲ್ಲೆಯ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

ನಾಯಿಗಾಗಿ ಹೆತ್ತು, ಹೊತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ ಮಗ

ಪ್ರಿಯತಮ ಜತೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ, ಎಸ್ಕೇಪ್ ಆಗಲು ಮಾಡಿದ ನಾಟಕ ಕೇಳಿದ್ರೆ ಶಾಕ್ ಆಗ್ತೀರಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮೂರು ವರ್ಷ ನಮ್ಮದು ಹೋರಾಟ ಪರ್ವ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments